Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:21 - ಪರಿಶುದ್ದ ಬೈಬಲ್‌

21 ದೇವರು ನಿನ್ನನ್ನು ಕರೆದಾಗ ನೀನು ಗುಲಾಮನಾಗಿದ್ದರೆ, ಚಿಂತಿಸಬೇಡ. ಆದರೆ ನೀನು ಬಿಡುಗಡೆಯಾಗಲು ಸಾಧ್ಯವಿದ್ದರೆ, ಬಿಡುಗಡೆಯಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದರ ಕುರಿತು ಚಿಂತಿಸಬೇಡ ಆದರೆ ಬಿಡುಗಡೆ ಹೊಂದುವುದಕ್ಕೆ ಸಾಧ್ಯವಾಗುವುದಾದರೆ ನೀನು ಸ್ವತಂತ್ರನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರು ಕರೆದಾಗ ನೀನು ದಾಸ್ಯದಲ್ಲಿದ್ದೆಯೋ? ಚಿಂತೆಯಿಲ್ಲ. ಆದರೆ ಸ್ವತಂತ್ರನಾಗುವ ಅವಕಾಶ ದೊರೆತರೆ ಅದನ್ನು ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದಿಯೋ? ಅದಕ್ಕೆ ಚಿಂತೆಮಾಡಬೇಡ. ಆದರೆ ಬಿಡುಗಡೆ ಹೊಂದುವದಕ್ಕೆ ನಿನ್ನ ಕೈಯಿಂದಾದರೆ ಸ್ವತಂತ್ರನಾಗುವದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದಕ್ಕೆ ಚಿಂತೆ ಮಾಡಬೇಡ. ಆದರೆ ಬಿಡುಗಡೆಯಾಗುವುದಕ್ಕೆ ನೀನು ಶಕ್ತನಾದರೆ ಅದನ್ನೇ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತುಕಾ ಬಲ್ವುನ್ ಹೊಲ್ಲೆ ತನ್ನಾ ತಿಯಾ ಗುಲಾಮ್ ಹೊತ್ತೆ ಕಾಯ್? ತಿಯಾ ಚಿಂತಾ ಕರುನಕೊ, ಸ್ವತಂತ್ರ್ ಹೊತಲೊ ಅವ್ಕಾಸ್ ತುಕಾ ಗಾವ್ಲೊ ತರ್ ಕುಶಿನಿ ಘೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:21
14 ತಿಳಿವುಗಳ ಹೋಲಿಕೆ  

ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.


“ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ಯಾವಾಗಲೂ ಆಲೋಚಿಸಬೇಡಿರಿ ಮತ್ತು ಚಿಂತಿಸಬೇಡಿರಿ.


ಆತನು ನಿಮ್ಮನ್ನು ಪರಿಪಾಲಿಸುವುದರಿಂದ ನಿಮ್ಮ ಚಿಂತೆಗಳನ್ನೆಲ್ಲಾ ಆತನಿಗೆ ಒಪ್ಪಿಸಿರಿ.


ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ನಾನು ಈ ಮಾತುಗಳನ್ನು ಹೇಳುತ್ತಿರುವುದು ನನಗಿರುವ ಕೊರತೆಯ ದೆಸೆಯಿಂದಲ್ಲ. ನನ್ನಲ್ಲಿರುವಂಥವುಗಳಲ್ಲಿ ಮತ್ತು ನನಗೆ ಸಂಭವಿಸುವ ಪ್ರತಿಯೊಂದರಲ್ಲಿ ತೃಪ್ತನಾಗಿರಲು ನಾನು ಕಲಿತುಕೊಂಡಿದ್ದೇನೆ.


ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ಇರಬೇಕು.


ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು