Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:37 - ಪರಿಶುದ್ದ ಬೈಬಲ್‌

37 ಆದರೆ ಮತ್ತೊಬ್ಬನು ಮದುವೆಯ ಅಗತ್ಯವಿಲ್ಲವೆಂದು ತನ್ನ ಮನಸ್ಸಿನಲ್ಲಿ ದೃಢವಾಗಿ ನಿಶ್ಚಯಿಸಿಕೊಂಡಿದ್ದರೆ ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲು ಸ್ವತಂತ್ರನಾಗಿದ್ದಾನೆ. ಅವನು ತನ್ನ ಮಗಳಿಗೆ ಮದುವೆ ಮಾಡುವುದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಧರಿಸಿದ್ದರೆ ಅವನು ಒಳ್ಳೆಯದನ್ನೇ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆದರೆ ಅವನು ಯಾರ ಒತ್ತಾಯಕ್ಕೂ ಮಣಿಯದೆ ದೃಢಚಿತ್ತನಾಗಿದ್ದು, ತನಗೆ ನಿಶ್ಚಿತಳಾದ ಕನ್ಯೆಯೊಡನೆ ಮದುವೆಯಾಗುವುದು ಬೇಡವೆಂದು ತೀರ್ಮಾನಿಸಿಕೊಂಡರೆ ಮತ್ತು ತನ್ನ ಸಂಯಮವನ್ನು ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವನು ಅಂತೆಯೇ ಮಾಡಲಿ. ಹೀಗೆ, ಮದುವೆ ಆಗದೆ ಇರುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವದಿಲ್ಲವೆಂದು ತನ್ನೊಳಗೆ ನಿರ್ಣಯಿಸಿಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ, ತನ್ನಿಷ್ಟವನ್ನು ನಡೆಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿಕೊಂಡರೆ, ಅವನು ಹಾಗೆ ಮಾಡುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಖರೆ ಜೊ ಕೊನ್ ಕಸ್ಲಿಬಿ ಜಬರ್ದಸ್ತಿ ನಸ್ತಾನಾ ಅಪ್ನಾಚ್ಯಾ ಲಗ್ನಾಚಿ ಗೊಸ್ಟ್ ಹೊಲ್ಲ್ಯಾ ತ್ಯಾ ಚೆಡ್ವಾಕ್ ತಿ ಕಶಿ ಹಾಯ್ ತ್ಯಾಚ್ ಸ್ಥಿತಿರ್ ಥವ್ಕ್ ಮನ್ ಕರ್‍ತಾ ಹೊಲ್ಯಾರ್, ತೊಬಿ ಬರೆಚ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:37
6 ತಿಳಿವುಗಳ ಹೋಲಿಕೆ  

ತನ್ನ ಮಗಳ (ಕನ್ನಿಕೆಯ) ಮದುವೆಯ ವಯಸ್ಸು ಮೀರಿ ಹೋಗುವಂತೆ ಬಿಟ್ಟುಕೊಡುವುದು ಒಳ್ಳೆಯದಲ್ಲವೆಂದೂ, ಆಕೆಗೆ ಮದುವೆ ಮಾಡಿಸುವುದು ಅವಶ್ಯಕವೆಂದೂ ಒಬ್ಬನು ಭಾವಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವನು ಅವರಿಗೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.


ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ.


ಪ್ರತಿಯೊಬ್ಬ ವ್ಯಕ್ತಿಯು ತನ್ನ ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೋ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ.


ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.


ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದ್ದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.


ನೀವು ಬರೆದು ಕೇಳಿರುವ ಸಂಗತಿಗಳ ಬಗ್ಗೆ ಈಗ ನಾನು ಚರ್ಚಿಸುತ್ತೇನೆ. ಪುರುಷನು ಮದುವೆ ಮಾಡಿಕೊಳ್ಳದಿರುವುದು ಒಳ್ಳೆಯದೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು