Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:4 - ಪರಿಶುದ್ದ ಬೈಬಲ್‌

4 ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಹೊಲ್ಯಾರ್ ಮುರ್ತಿಯಾಕ್ನಿ ಭೆಟ್ವಲ್ಲೆ ಕೊನ್ಬಿ ಖಾವ್ಕ್ ಹೊತಾ ಕಾಯ್? “ಮುರ್ತಿ ಮನ್ತಲೆ ತೆ ಕಾಯ್ಬಿ ನ್ಹಯ್ ಅನಿ ಎಕ್ ದೆವಾ ಶಿವಾಯ್ ದುಸ್ರೊ ದೆವ್ ನಾ ಮನುನ್ ಅಮ್ಕಾ ಗೊತ್ತ್ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:4
33 ತಿಳಿವುಗಳ ಹೋಲಿಕೆ  

“ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.


“ಸುಳ್ಳುದೇವರುಗಳೇ, ಕೇಳಿ. ನೀವು ಶೂನ್ಯಕ್ಕಿಂತ ಕಡಿಮೆಯಾದವರು. ನೀವು ಏನನ್ನೂ ಮಾಡಲಾರಿರಿ. ದೇವರ ದೃಷ್ಠಿಯಲ್ಲಿ ತುಚ್ಛನಾದವನು ಮಾತ್ರ ನಿಮ್ಮನ್ನು ಪೂಜಿಸುವನು.”


ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.


ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಸಮಸ್ತವನ್ನೂ ಆಳುತ್ತಾನೆ. ಆತನು ಸರ್ವವ್ಯಾಪಿಯಾಗಿದ್ದಾನೆ ಮತ್ತು ಎಲ್ಲರಲ್ಲಿ ವಾಸಿಸುವವನಾಗಿದ್ದಾನೆ.


“ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!


ಅದಕ್ಕೆ ಯೇಸು, “ಇಸ್ರೇಲಿನ ಜನರೇ ಕೇಳಿರಿ, ‘ನಮ್ಮ ದೇವರಾದ ಪ್ರಭುವೊಬ್ಬನೇ ದೇವರು.


ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.


ನಿಮಗೆ ತಿಳುವಳಿಕೆ ಇರುವುದರಿಂದ ನೀವು ವಿಗ್ರಹದ ಗುಡಿಯೊಂದರಲ್ಲಿ ಸಂಕೋಚವಿಲ್ಲದೆ ಊಟ ಮಾಡಬಹುದು. ನೀವು ಅಲ್ಲಿ ಊಟ ಮಾಡುವುದನ್ನು ನಂಬಿಕೆಯಲ್ಲಿ ಬಲಹೀನನಾದ ವ್ಯಕ್ತಿಯೊಬ್ಬನು ನೋಡಿ, ವಿಗ್ರಹಗಳಿಗೆ ಅರ್ಪಿತವಾದ ಮಾಂಸವನ್ನು ತಿನ್ನಲು ಪ್ರೋತ್ಸಾಹಗೊಳ್ಳಬಹುದು. ಆದರೆ ಅದನ್ನು ತಿನ್ನಕೊಡದೆಂಬ ಭಾವನೆ ಅವನಲ್ಲಿ ಆಳವಾಗಿ ಬೇರೂರಿದೆ.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.


ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


“ಇಸ್ರೇಲರ ದೇವರೇ, ಸರ್ವಶಕ್ತನಾದ ಯೆಹೋವನೇ, ನೀನು ಕೆರೂಬಿಯರ ರೆಕ್ಕೆಯ ಮೇಲೆ ಆಸೀನನಾಗಿರುವೆ. ಇಡೀ ಭೂಮಂಡಲದಲ್ಲಿರುವ ರಾಜ್ಯಗಳನ್ನೆಲ್ಲಾ ನೀನೇ ಆಳುವವನಾಗಿರುವೆ; ಹೌದು, ನೀನೊಬ್ಬನೇ ಆಳುವವನಾಗಿರುವೆ. ನೀನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುವೆ.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕೆಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರಿಲ್ಲವೆಂದೂ ನೀವು ತಿಳಿದುಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು.


ನಾನು, ‘ಯೆಹೋವನೇ, ನನ್ನ ಒಡೆಯನೇ, ನಾನು ನಿನ್ನ ಸೇವಕ. ನಿನ್ನ ತ್ರಾಣವುಳ್ಳ ಹಸ್ತದಿಂದ ಮಾಡಿದ ಪರಾಕ್ರಮದ ಕಾರ್ಯಗಳನ್ನು ನೀನು ನನಗೆ ಸ್ವಲ್ಪ ಮಟ್ಟಿಗೆ ತೋರಿಸಿರುವೆ. ನೀನು ಮಾಡಿದ ಮಹಾಕೃತ್ಯಗಳನ್ನು ಮಾಡಲು ಪರಲೋಕದ ಅಥವಾ ಭೂಲೋಕದ ಯಾವ ದೇವರುಗಳಿಗೂ ಸಾಧ್ಯವಿಲ್ಲ.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು!


ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.


ಹೀಗಿರಲಾಗಿ, ಈ ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಈ ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ.


ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು