Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:7 - ಪರಿಶುದ್ದ ಬೈಬಲ್‌

7 ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಸಗ್ಳ್ಯಾಕ್ನಿ ಹೆ ಖರೆ ಗೊತ್ತ್ ನಾ. ಉಲ್ಲೆ ಜಾನಾ ಮುರ್ತಿ ಪುಜಾ ಕರ್‍ತಲ್ಯಾ ಸವಯಿತ್ ಪಡಲ್ಲೆ ಹಾತ್, ಕಾಲ್‍ ಪರ್ವಾ ಪತರ್‌ಬಿ ಪಡಲ್ಲೆ ಹಾತ್ ಅನಿ ಎವ್ಡೆ ತೆನಿ ಭುತ್ತುರ್ ಶಿರ್ಕುನ್ ಬಸ್ಲ್ಯಾತ್ ಕಿ ಮಟ್ಲ್ಯಾರ್ ಅತ್ತಾ ತೆನಿ ಖಾತಾತ್‍ ತೆ ಖಾನ್ ಖರೆಬಿ ಮುರ್ತಿಕ್ ಭೆಟ್ವಲ್ಲೆಚ್ ಮನುನ್ ತೆನಿ ಚಿಂತಾತ್, ಅನಿ ತೆಂಚೊ ಭುತ್ತುರ್‍ಲೊ ಬಳ್ ನಸಲ್ಲೊ ಮನ್ ಮ್ಹೆಳ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:7
11 ತಿಳಿವುಗಳ ಹೋಲಿಕೆ  

ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆ ಆಹಾರಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ.


ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.


ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಳ್ಳೆಯತನವು ತುಂಬಿದೆಯೆಂದು ನನಗೆ ನಿಶ್ಚಯವಾಗಿ ಗೊತ್ತಿದೆ. ಅಗತ್ಯವಾದ ಸಕಲ ಜ್ಞಾನವು ನಿಮಗಿದೆಯೆಂದು ಮತ್ತು ಒಬ್ಬರಿಗೊಬ್ಬರು ಸಲಹೆ ನೀಡಬಲ್ಲಿರೆಂದು ನನಗೆ ಗೊತ್ತಿದೆ.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ಮಾಂಸದ ಮಾರುಕಟ್ಟೆಯಲ್ಲಿ ಮಾರುವ ಯಾವ ಮಾಂಸವನ್ನಾದರೂ ತಿನ್ನಿರಿ. ನೀವು ತಿನ್ನಬಾರದೆಂದು ಯೋಚಿಸುವ ಮಾಂಸದಂತೆ ಅದು ತೋರಿದರೂ ಆ ಮಾಂಸದ ಬಗ್ಗೆ ಯಾವ ಪ್ರಶ್ನೆಗಳನ್ನೂ ಕೇಳಬೇಡಿರಿ.


ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು