Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:11 - ಪರಿಶುದ್ದ ಬೈಬಲ್‌

11 ನಾವು ನಿಮ್ಮ ಮಧ್ಯದಲ್ಲಿ ಆತ್ಮಿಕ ಬೀಜವನ್ನು ಬಿತ್ತಿದೆವು. ಆದ್ದರಿಂದ ಈ ಜೀವನಕ್ಕೆ ಬೇಕಾದ ದೈನಂದಿನ ಅಗತ್ಯತೆಗಳನ್ನು ನಿಮ್ಮಿಂದ ನಾವು ಪಡೆದುಕೊಳ್ಳಬೇಕು. ಖಂಡಿತವಾಗಿ ಇದು ಹೆಚ್ಚೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮಲ್ಲಿ ಆಧ್ಯಾತ್ಮಿಕ ಬೀಜವನ್ನು ಬಿತ್ತನೆಮಾಡಿದ ನಾವು ಪ್ರತಿಫಲವಾಗಿ ದೈನಂದಿನ ಅಗತ್ಯಗಳನ್ನು ಅಪೇಕ್ಷಿಸುವುದು ಅತಿಯಾಯಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾವು ನಿಮಗೋಸ್ಕರ ಆತ್ಮಸಂಬಂಧವಾದ ಬೀಜವನ್ನು ಬಿತ್ತಿದ ಮೇಲೆ ನಿವ್ಮಿುಂದ ಶರೀರಸಂಬಂಧವಾದ ಪೈರನ್ನು ಕೊಯ್ಯುವದು ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾವು ನಿಮ್ಮಲ್ಲಿ ಆತ್ಮಿಕ ಸಂಗತಿಗಳನ್ನು ಬಿತ್ತಿದ ಮೇಲೆ, ನಿಮ್ಮಿಂದ ಭೌತಿಕ ಸುಗ್ಗಿಯನ್ನು ಕೊಯ್ಯುವುದು ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಮಿ ತುಮ್ಚ್ಯಾ ಭುತ್ತುರ್ ಆತ್ಮಿಕ್ ಬಿಂಯ್ ಪೆರ್ಲಾವ್ ಹೊಲ್ಯಾರ್, ತುಮ್ಚ್ಯಾತ್ನಾ ಸಂಸಾರಿ ಜಿವನಾಕ್ ಗರಜ್ ಹೊತ್ತೆ ಅಮಿ ಕಾಪ್ಲ್ಯಾ ಕಾಯ್ ಮೊಟೆ ಹೊಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:11
8 ತಿಳಿವುಗಳ ಹೋಲಿಕೆ  

ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಸ್ವಂತ ಇಷ್ಟದಿಂದಲೇ ಈ ಕಾರ್ಯವನ್ನು ಮಾಡಿದ್ದಾರೆ. ಅದು ಅವರ ಕರ್ತವ್ಯವೂ ಹೌದು. ಯೆಹೂದ್ಯರಲ್ಲದ ಅವರು ಯೆಹೂದ್ಯರ ಆತ್ಮಿಕ ಅಶೀರ್ವಾದಗಳಲ್ಲಿ ಪಾಲು ಹೊಂದಿರುವುದರಿಂದ ಅವರು ತಮ್ಮಲ್ಲಿರುವಂಥವುಗಳ ಮೂಲಕ ಅವರಿಗೆ ನೆರವು ನೀಡುವುದು ಅವರ ಹೊಣೆಯಾಗಿದೆ.


ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.


ಹೀಗಿರಲು ಸೈತಾನನ ಸೇವಕರು ತಾವು ಸರಿಯಾದ ಕೆಲಸವನ್ನು ಮಾಡುತ್ತಿರುವವರಂತೆ ನಟಿಸುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಆದರೆ ಅವರು ಮಾಡುತ್ತಿರುವ ಕೆಲಸಗಳ ಪ್ರತಿಫಲವಾಗಿ ಅವರಿಗೆ ಕೊನೆಯಲ್ಲಿ ದಂಡನೆಯಾಗುವುದು.


ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.


ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು.


ಸುವಾರ್ತೆಯನ್ನು ಬೋಧಿಸುವ ಜನರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸುವಾರ್ತೆಯನ್ನು ಬೋಧಿಸುವವರು ತಮಗೆ ಅಗತ್ಯವಾದುವುಗಳನ್ನು ಈ ಸೇವೆಯ ಮೂಲಕ ಪಡೆದುಕೊಳ್ಳಬೇಕೆಂದು ಪ್ರಭುವು ಆಜ್ಞಾಪಿಸಿದ್ದಾನೆ.


ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು