Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:13 - ಪರಿಶುದ್ದ ಬೈಬಲ್‌

13 ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವಾಲಯದ ಸೇವೆಯಲ್ಲಿರುವವರು ದೇವಾಲಯದ ಆದಾಯದಿಂದ ಜೀವಿಸುತ್ತಾರೆ. ಬಲಿಪೀಠದ ಬಳಿ ಸೇವೆಮಾಡುವವರು ಅರ್ಪಿತವಾದ ಬಲಿಯಿಂದ ಪಾಲನ್ನು ಪಡೆಯುತ್ತಾರೆ. ಇದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವಾಲಯದ ಊಳಿಗವನ್ನು ನಡಿಸುವವರು ದೇವಾಲಯದ ಆದಾಯದಿಂದ ಊಟಮಾಡುತ್ತಾರೆಂಬದೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬದೂ ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆ ಕೊನ್ ದೆವಾಚ್ಯಾ ಗುಡಿತ್ ಸೆವಾ ಕರ್ತಾತ್ ತೆನಿ ಥೈ ಯೆತಲ್ಯಾ ಕಮಾಯಿತ್ನಾ ಖಾತಾತ್, ಅನಿ ಜೆವ್ತಾತ್ ಅನಿ ಅಲ್ತಾರಿಚಿ ಸೆವಾ ಕರ್ತಲ್ಯಾಕ್ನಿ ಅಲ್ತಾರಿ ವೈರ್ ಭೆಟ್ವಲ್ಲ್ಯಾಚೊ ವಾಟೊ ಹಾಯ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:13
15 ತಿಳಿವುಗಳ ಹೋಲಿಕೆ  

ಪಾಪಪರಿಹಾರಕ ಯಜ್ಞವನ್ನು ಅರ್ಪಿಸುವ ಯಾಜಕನು ಅದನ್ನು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.


ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?


ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು.


ಹೀಗಿದ್ದುದರಿಂದ ಅವರಿಗೆ ತಮ್ಮ ಸಹೋದರರ ಜೊತೆಯಲ್ಲಿ ವಾಗ್ದಾನದ ದೇಶದೊಳಗೆ ಸ್ವಾಸ್ತ್ಯವು ದೊರಕಲಿಲ್ಲ. ಅವರ ಸ್ವಾಸ್ತ್ಯವು ಯೆಹೋವನೇ ಆಗಿದ್ದನು. ಇದು ದೇವರಾದ ಯೆಹೋವನ ವಾಗ್ದಾನ.)


ಬಳಿಕ ಯಾಜಕನು ವೇದಿಕೆಯ ಮೇಲೆ ಕೊಬ್ಬನ್ನು ಹೋಮಮಾಡಬೇಕು. ಆದರೆ ಪಶುವಿನ ಎದೆಯ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿದೆ.


ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.


ಉಳಿದದ್ದನ್ನು ನೀವು ಮತ್ತು ನಿಮ್ಮ ಕುಟುಂಬದವರು ಎಲ್ಲಿ ಬೇಕಾದರೂ ತಿನ್ನಬಹುದು. ನೀವು ದೇವದರ್ಶನಗುಡಾರದಲ್ಲಿ ಮಾಡುವ ಕೆಲಸಕ್ಕೆ ಇದು ನಿಮಗೆ ಪ್ರತಿಫಲವಾಗಿದೆ.


ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.


ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹುಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ಆ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ.


ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು