Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:14 - ಪರಿಶುದ್ದ ಬೈಬಲ್‌

14 ಸುವಾರ್ತೆಯನ್ನು ಬೋಧಿಸುವ ಜನರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸುವಾರ್ತೆಯನ್ನು ಬೋಧಿಸುವವರು ತಮಗೆ ಅಗತ್ಯವಾದುವುಗಳನ್ನು ಈ ಸೇವೆಯ ಮೂಲಕ ಪಡೆದುಕೊಳ್ಳಬೇಕೆಂದು ಪ್ರಭುವು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದೇ ಪ್ರಕಾರ ಶುಭಸಂದೇಶ ಪ್ರಚಾರಕರು ಶುಭಸಂದೇಶ ಪ್ರಚಾರದ ಆದಾಯದಿಂದಲೇ ಜೀವನ ನಡೆಸಬೇಕೆಂದು ಪ್ರಭುವೇ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆಚ್ ಬರಿ ಖಬರ್ ಪ್ರಚಾರ್ ಕರ್ತಲ್ಯಾಕ್ನಿ ಬರ್‍ಯಾ ಖಬ್ರೆ ವೈನಾಚ್ ಜಿವನ್ ಕರುಕ್ ಪಾಜೆ ಮನುನ್ ಧನಿಯಾನುಚ್ ಹುಕುಮ್ ದಿಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:14
13 ತಿಳಿವುಗಳ ಹೋಲಿಕೆ  

ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.


ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.


ಊಟಮಾಡುವುದಕ್ಕೆ ಮತ್ತು ಪಾನೀಯಗಳನ್ನು ಕುಡಿಯುವುದಕ್ಕೆ ನಮಗೆ ಹಕ್ಕಿಲ್ಲವೇ?


ಆ ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಆ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ.


“ನೀವು ಒಂದು ಊರಿಗೆ ಹೋದಾಗ ಆ ಊರಿನ ಜನರು ನಿಮ್ಮನ್ನು ಸ್ವಾಗತಿಸಿದರೆ, ಅವರು ಕೊಡುವ ಆಹಾರವನ್ನು ಊಟಮಾಡಿರಿ.


ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು.


ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.


ನಾವು ನಿಮ್ಮ ಮಧ್ಯದಲ್ಲಿ ಆತ್ಮಿಕ ಬೀಜವನ್ನು ಬಿತ್ತಿದೆವು. ಆದ್ದರಿಂದ ಈ ಜೀವನಕ್ಕೆ ಬೇಕಾದ ದೈನಂದಿನ ಅಗತ್ಯತೆಗಳನ್ನು ನಿಮ್ಮಿಂದ ನಾವು ಪಡೆದುಕೊಳ್ಳಬೇಕು. ಖಂಡಿತವಾಗಿ ಇದು ಹೆಚ್ಚೇನೂ ಅಲ್ಲ.


ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಈ ಹಕ್ಕಿದೆ. ಆದರೆ ನಾವು ಈ ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ.


ಸುವಾರ್ತೆಯನ್ನು ಬೋಧಿಸುತ್ತೇನೆಂಬುದು ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವಲ್ಲ. ಸುವಾರ್ತೆಯನ್ನು ಬೋಧಿಸುವುದು ನನ್ನ ಕರ್ತವ್ಯವಾಗಿದೆ. ಅದನ್ನು ನಾನು ಮಾಡಲೇಬೇಕು. ನಾನು ಸುವಾರ್ತೆಯನ್ನು ಬೋಧಿಸದಿದ್ದರೆ, ನನ್ನ ಗತಿಯನ್ನು ಏನು ಹೇಳಲಿ!


ನಾನು ಕ್ರಿಸ್ತನ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ತ್ರೋವಕ್ಕೆ ಹೋದೆನು. ಪ್ರಭುವು ಅಲ್ಲಿ ನನಗೆ ಒಳ್ಳೆಯ ಅವಕಾಶವನ್ನು ಕೊಟ್ಟನು.


ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು