Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:17 - ಪರಿಶುದ್ದ ಬೈಬಲ್‌

17 ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಬಹುಮಾನ ದೊರೆಯುವದು; ಮತ್ತೊಬ್ಬನ ಇಷ್ಟದಿಂದ ಮಾಡಿದರೆ ಮನೆವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾಜ್ಯಾ ಸ್ವಂತ್ ಖುಶಿನ್ ಮಿಯಾ ಹೆ ಕಾಮ್ ಕರ್‍ತಾ ಹೊಲ್ಯಾರ್ ಮಾಕಾ ಕಾಯ್ಬಿ ಗಾವ್ತಾ ಮನುನ್ ಆಶಾ ಕರುಕ್ ಹೊಯ್ ಹೊತ್ತೆ, ಖರೆ ಮಿಯಾ ತೆ ಎಕ್ ಕರ್ತವ್ಯ್ ಮನುನ್ ಕರ್ತಾ, ಮಾಕಾ ದೆವಾನ್ ದಿಲ್ಲೆ ಕಾಮ್ ಹೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:17
30 ತಿಳಿವುಗಳ ಹೋಲಿಕೆ  

ಆದರೆ ಪೇತ್ರನಂತೆ ನನಗೂ ದೇವರು ವಿಶೇಷವಾದ ಕೆಲಸವನ್ನು ಕೊಟ್ಟಿದ್ದಾನೆಂಬುದನ್ನು ಈ ನಾಯಕರು ತಿಳಿದುಕೊಂಡರು. ಯೆಹೂದ್ಯರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ಪೇತ್ರನಿಗೆ ಕೊಟ್ಟನು. ಆದರೆ ಯೆಹೂದ್ಯರಲ್ಲದವರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು.


ಬೀಜ ಬಿತ್ತುವವನ ಮತ್ತು ನೀರನ್ನು ಹಾಕುವವನ ಉದ್ದೇಶವು ಒಂದೇ ಆಗಿದೆ. ಮತ್ತು ಪ್ರತಿಯೊಬ್ಬನಿಗೂ ಅವನವನ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುವುದು.


ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಈ ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಆ ಕಾರ್ಯ.


ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು.


ಪ್ರವಾದಿಯನ್ನು ಪ್ರವಾದಿಯೆಂದು ಸಂಧಿಸಿ ಸ್ವಾಗತಿಸುವವನು ಆ ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಆ ಸತ್ಪುರುಷನಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ನಾವು ಸುವಾರ್ತೆಯನ್ನು ತಿಳಿಸುತ್ತೇವೆ. ಏಕೆಂದರೆ ದೇವರು ನಮ್ಮನ್ನು ಪರಿಶೋಧಿಸಿದ್ದಾನೆ ಮತ್ತು ಸುವಾರ್ತೆಯನ್ನು ತಿಳಿಸಲು ನಮ್ಮನ್ನು ನೇಮಿಸಿದ್ದಾನೆ. ಆದುದರಿಂದ ಜನರನ್ನು ಮೆಚ್ಚಿಸಲು ಪ್ರಯತ್ನಿಸದೆ ನಮ್ಮ ಹೃದಯಗಳನ್ನು ಪರೀಕ್ಷಿಸುವಾತನಾದ ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತೇವೆ.


ಅಸ್ತಿವಾರದ ಮೇಲೆ ಕಟ್ಟಿದ ಕಟ್ಟಡವು ಸ್ಥಿರವಾಗಿದ್ದರೆ, ಕಟ್ಟಿದವನು ಪ್ರತಿಫಲವನ್ನು ಹೊಂದಿಕೊಳ್ಳುವನು.


ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.


ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.


ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.


ಕೆಲವರು ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ತಾವೇ ಮುಂದೆ ಬಂದರು. ಉಳಿದವರು ತಾವಾಗಿಯೇ ಮುಂದೆ ಬಂದವರನ್ನು ವಂದಿಸಿ ಆಶೀರ್ವದಿಸಿದರು.


ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.


ಬೆಳ್ಳಿಬಂಗಾರಗಳಿಂದ ತಯಾರಿಸಬೇಕಾದ ಎಲ್ಲಾ ವಸ್ತುಗಳಿಗೆ ಬೇಕಾದ ಬೆಳ್ಳಿಬಂಗಾರಗಳನ್ನೂ ಇದರ ನಾಜೂಕು ಕೆಲಸ ಮಾಡುವ ಕುಶಲಕರ್ಮಿಗಳನ್ನೂ ಕೊಟ್ಟಿರುತ್ತೇನೆ. ಈಗ ನಿಮ್ಮಲ್ಲಿ ಎಷ್ಟು ಮಂದಿ ನಿಮ್ಮನ್ನೇ ಯೆಹೋವನಿಗಾಗಿ ಪ್ರತಿಷ್ಠಿಸಿಕೊಳ್ಳುವಿರಿ?” ಎಂದು ಹೇಳಿದನು.


ಆದರೆ ಈ ವಿಷಯದಲ್ಲಿ ನಿನ್ನ ಒಪ್ಪಿಗೆ ಪಡೆಯದೆ ನಿರ್ಧಾರ ತೆಗೆದುಕೊಳ್ಳಲು ನನಗೆ ಇಷ್ಟವಿಲ್ಲ. ಏಕೆಂದರೆ ನೀನು ಮಾಡುವ ಒಳ್ಳೆಕಾರ್ಯವು ಮನಃ ಪೂರ್ವಕವಾಗಿರಬೇಕೇ ಹೊರತು ಬಲತ್ಕಾರದಿಂದಾಗಕೂಡದು.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ಸುವಾರ್ತೆಯನ್ನು ಬೋಧಿಸುತ್ತೇನೆಂಬುದು ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವಲ್ಲ. ಸುವಾರ್ತೆಯನ್ನು ಬೋಧಿಸುವುದು ನನ್ನ ಕರ್ತವ್ಯವಾಗಿದೆ. ಅದನ್ನು ನಾನು ಮಾಡಲೇಬೇಕು. ನಾನು ಸುವಾರ್ತೆಯನ್ನು ಬೋಧಿಸದಿದ್ದರೆ, ನನ್ನ ಗತಿಯನ್ನು ಏನು ಹೇಳಲಿ!


ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.


ಅದು ಸಂಭವಿಸುವುದಕ್ಕೆ ಮುಂಚೆಯೇ ನಾನು ಅದರ ವಿಷಯವಾಗಿ ನಿಮಗೆ ಎಚ್ಚರಿಕೆ ಕೊಟ್ಟಿದ್ದೇನೆ.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.


ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.


ಹೀಗಿರಲು, ನನಗೆ ಯಾವ ಬಹುಮಾನ ಸಿಕ್ಕುವುದು? ಸುವಾರ್ತೆಯನ್ನು ಉಚಿತವಾಗಿ ಬೋಧಿಸುವುದೊಂದೇ ನನಗೆ ದೊರೆಯುವ ಬಹುಮಾನವಾಗಿದೆ. ಆದ್ದರಿಂದ ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು