Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:19 - ಪರಿಶುದ್ದ ಬೈಬಲ್‌

19 ನಾನು ಸ್ವತಂತ್ರನಾಗಿದ್ದೇನೆ; ಯಾರ ಅಧೀನದಲ್ಲಿಯೂ ಇಲ್ಲ. ಆದರೆ ನನ್ನಿಂದ ಸಾಧ್ಯವಾದಷ್ಟು ಜನರನ್ನು ರಕ್ಷಣಾ ಮಾರ್ಗಕ್ಕೆ ನಡೆಸಲು ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಎಲ್ಲಾ ವಿಷಯದಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನನ್ನನ್ನು ಎಲ್ಲರಿಗೂ ಅಧೀನಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಸ್ವತಂತ್ರನಾಗಿದ್ದರೂ, ಯಾರಿಗೂ ಸೇರಿದವನಾಗಿರದಿದ್ದರೂ, ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂಬ ಉದ್ದೇಶದಿಂದ ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಿಯಾ ಕೊನಾಚೊಬಿ ಗುಲಾಮ್ ನ್ಹಯ್ ಜಾಲ್ಯಾರ್‌ಬಿ ಹೊತಾ ತವ್ಡ್ಯಾ ಮಾನ್ಸಾಕ್ನಿ ಕಮ್ವುನ್ ಘೆವ್‍ಸಾಟ್ನಿ ಮಿಯಾ ಸಗ್ಳ್ಯಾಂಚೊ ಗುಲಾಮ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:19
21 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


“ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.


ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.


ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.


ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.


ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ.


ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.


ಸ್ತ್ರೀಯರೇ, ಇದೇ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ


ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.


ನಾನು ಎಲ್ಲಾ ಜನರ ಅಂದರೆ ಗ್ರೀಕರ ಮತ್ತು ಗ್ರೀಕರಲ್ಲದವರ, ಹಾಗೂ ಜ್ಞಾನಿಗಳ ಮತ್ತು ಮೂಢರ ಸೇವೆ ಮಾಡಲೇಬೇಕು.


ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.


ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ.


ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ.


ನಾನು ನನ್ನ ಸ್ವಂತ ಜನರಲ್ಲಿ (ಯೆಹೂದ್ಯರಲ್ಲಿ) ಅಸೂಯೆಯನ್ನು ಉಂಟುಮಾಡಿ ಅವರಲ್ಲಿ ಕೆಲವರಾದರೂ ರಕ್ಷಣೆ ಹೊಂದುವಂತೆ ಮಾಡಬಲ್ಲೆನೆಂಬ ನಿರೀಕ್ಷೆ ನನಗಿದೆ.


ಆದರೆ ನೀವೇ ಆ ರೀತಿ ಭಾವಿಸಿಕೊಂಡಿದ್ದೀರಿ ಎಂದು ನಾನು ಹೇಳುತ್ತಿಲ್ಲ. ಆದರೆ ಮತ್ತೊಬ್ಬ ವ್ಯಕ್ತಿಯು ಅದನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವುದರಿಂದ ಅವನ ಮನಸ್ಸಾಕ್ಷಿಯ ದೆಸೆಯಿಂದ ನಮ್ಮ ಸ್ವಾತಂತ್ರ್ಯವು ವಿಚಾರಣೆಗೆ ಗುರಿಯಾಗಬಾರದು.


ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು.


ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು