Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:25 - ಪರಿಶುದ್ದ ಬೈಬಲ್‌

25 ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದರಲ್ಲಿ ಹೋರಾಡುವವರೆಲ್ಲರು ಎಲ್ಲಾ ವಿಷಯಗಳಲ್ಲಿ ವಿುತವಾಗಿರುತ್ತಾರೆ. ಅವರು ಬಾಡಿಹೋಗುವ ಜಯಮಾಲಿಕೆಯನ್ನು ಹೊಂದುವದಕ್ಕೆ ಸಾಧನೆಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲಿಕೆಯನ್ನು ಹೊಂದುವದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖೆಳಾತ್ ಭಾಗ್ ಘೆತಲೊ ಹರ್ ಎಕ್ಲೊ ಖೆಳ್ಗಾಡಿ ಸಗ್ಳ್ಯಾ ವಿಶಯಾತ್ ಮಿತ್ ಸಂಬಾಳ್ತಾ. ಸರುನ್ ಜಾತಲೆ ಎಕ್ ಭೊಮಾನ್ ಕಮ್ವುಸಾಟಿ ತೊ ಎವ್ಡೊ ತರಾಸ್ ಘೆತಾ; ಖರೆ ಅಮಿ ಕನ್ನಾಚ್ ಸರಿ ನಸಲ್ಲೆ ಭೊಮಾನ್ ಘೆವ್ಕ್ ಸಾಟ್ನಿ ಅಶೆ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:25
18 ತಿಳಿವುಗಳ ಹೋಲಿಕೆ  

ಓಟದ ಸ್ಪರ್ಧೆಯಲ್ಲಿ ಗೆಲ್ಲಬೇಕಾದರೆ, ಓಟಗಾರನು ಎಲ್ಲಾ ನಿಯಮಗಳನ್ನು ಪಾಲಿಸಬೇಕು.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.


“ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ದೇವರ ಸೇವೆಯನ್ನೂ


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.


ಸಾಧುತ್ವ, ಇಂದ್ರಿಯ ನಿಗ್ರಹ ಇಂಥವುಗಳೇ. ಇವುಗಳನ್ನು ತಪ್ಪೆಂದು ಯಾವ ಧರ್ಮಶಾಸ್ತ್ರವೂ ಹೇಳುವುದಿಲ್ಲ.


ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.


ನೀವು ಪಾಪದ ವಿರುದ್ಧ ಹೋರಾಡುತ್ತಿದ್ದರೂ ನಿಮ್ಮ ಹೋರಾಟಗಳು ನಿಮ್ಮನ್ನು ಸಾವಿನ ಸಮೀಪಕ್ಕೆ ಇನ್ನೂ ತಂದಿಲ್ಲ.


ಅಳಿದುಹೋಗುವ ಈ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಈ ಮಾತುಗಳು ನೆರವೇರುತ್ತವೆ: “ಮರಣವು ಜಯದಲ್ಲಿ ನುಂಗಿಯೇಹೋಯಿತು.”


ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:


ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.


ವೃದ್ಧರಾದವರು, ಜಿತೇಂದ್ರಿಯರೂ ಗಂಭೀರ ಸ್ವಭಾವದವರೂ ವಿವೇಕವುಳ್ಳವರೂ ಆಗಿರಬೇಕೆಂದು ತಿಳಿಸು. ಅವರು ತಮ್ಮ ನಂಬಿಕೆಯಲ್ಲಿ, ಪ್ರೀತಿಯಲ್ಲಿ ಮತ್ತು ತಾಳ್ಮೆಯಲ್ಲಿ ಬಲವಾಗಿರಬೇಕೆಂದು ತಿಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು