Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:3 - ಪರಿಶುದ್ದ ಬೈಬಲ್‌

3 ಕೆಲವು ಜನರು ನಮ್ಮನ್ನು ವಿಚಾರಣೆ ಮಾಡಲು ಬಯಸುತ್ತಾರೆ. ನಾನು ಅವರಿಗೆ ಕೊಡುವ ಉತ್ತರ ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನನ್ನು ಟೀಕಿಸುವವರಿಗೆ ನನ್ನ ಉತ್ತರ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನನ್ನು ವಿಚಾರಿಸುವವರಿಗೆ ಇದೇ ನನ್ನ ಉತ್ತರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಮೇಲೆ ತಪ್ಪು ಹೊರಿಸುವವರಿಗೆ ಇದೇ ನನ್ನ ಪ್ರತಿವಾದ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾಜಿ ಇಚಾರ್ನಿ ಕರ್ತಲ್ಯಾಕ್ನಿ ಮಾಜಿ ಜವಾಬ್ ಅಸೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:3
14 ತಿಳಿವುಗಳ ಹೋಲಿಕೆ  

ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.


ಬೇರೆ ಕೆಲವರು ತಮ್ಮ ಸ್ವಾರ್ಥದ ದೆಸೆಯಿಂದ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅವರ ಸುವಾರ್ತಾಸೇವೆಯ ಉದ್ದೇಶವೇ ತಪ್ಪಾಗಿದೆ. ಸೆರೆಯಲ್ಲಿರುವ ನನಗೆ ತೊಂದರೆ ಮಾಡಬೇಕೆಂಬುದೇ ಅವರ ಅಪೇಕ್ಷೆ.


ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ನಾನು ನಿಮ್ಮೊಂದಿಗೆ ಇಲ್ಲದಿರುವಾಗ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. ಏಕೆಂದರೆ ನಾನು ಬಂದಾಗ ನಿಮ್ಮನ್ನು ದಂಡಿಸುವುದಕ್ಕಾಗಿ ನನ್ನ ಅಧಿಕಾರವನ್ನು ಉಪಯೋಗಿಸುವ ಅಗತ್ಯವಿರುವುದಿಲ್ಲ. ಪ್ರಭುವು ನನಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಗೊಳಿಸುವುದಕ್ಕಾಗಿಯೇ ಹೊರತು ನಾಶಮಾಡುವುದಕ್ಕಾಗಿಯಲ್ಲ.


ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.


ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.


ಯಾವನಾದರೂ ತಾನು ಪ್ರವಾದಿಯೆಂದು ಅಥವಾ ತನ್ನಲ್ಲಿ ಆತ್ಮಿಕ ವರವಿದೆಯೆಂದು ಯೋಚಿಸುವುದಾದರೆ, ಇದು ಪ್ರಭುವಿನ ಆಜ್ಞೆಯೆಂದು ಅವನು ಅರ್ಥಮಾಡಿಕೊಳ್ಳಬೇಕು.


ಆದರೆ ನಾನು, ‘ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು’ ಎಂದು ಹೇಳಿದೆನು.


ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.


ಇತರ ಜನರು ನನ್ನನ್ನು ಅಪೊಸ್ತಲನನ್ನಾಗಿ ಸ್ವೀಕರಿಸಿಕೊಳ್ಳದಿರಬಹುದು. ಆದರೆ ನೀವಂತೂ ಖಂಡಿತವಾಗಿ ನನ್ನನ್ನು ಅಪೊಸ್ತಲನನ್ನಾಗಿ ಸ್ವೀಕರಿಸಿಕೊಳ್ಳುವಿರಿ. ನಾನು ಪ್ರಭುವಿನಲ್ಲಿ ಅಪೊಸ್ತಲನಾಗಿದ್ದೇನೆ ಎಂಬುದಕ್ಕೆ ನೀವೇ ಆಧಾರವಾಗಿದ್ದೀರಿ.


ಊಟಮಾಡುವುದಕ್ಕೆ ಮತ್ತು ಪಾನೀಯಗಳನ್ನು ಕುಡಿಯುವುದಕ್ಕೆ ನಮಗೆ ಹಕ್ಕಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು