Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:5 - ಪರಿಶುದ್ದ ಬೈಬಲ್‌

5 ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕ್ರೈಸ್ತ ಸಹೋದರಿಯಾಗಿರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ವಿುಕ್ಕಾದ ಅಪೊಸ್ತಲರಂತೆಯೂ ಕರ್ತನ ತಮ್ಮಂದಿರಂತೆಯೂ ಕೇಫನಂತೆಯೂ ನಮಗೆ ಹಕ್ಕಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹುರಲ್ಲ್ಯಾ ಅಪೊಸ್ತಲಾನಿ, ಧನಿಯಾಚ್ಯಾ ಭಾವಾನಿ ಅನಿ ಕೆಫಾಸಾನ್ ಕರಲ್ಲ್ಯಾ ಸಾರ್ಕೆ ಎಕ್ ಕ್ರಿಸ್ತ್ ವಿಶ್ವಾಸಾತ್ ಹೊತ್ತ್ಯಾ ಬಾಯ್ಕೊಕ್‍ ಲಗಿನ್ ಹೊವ್ನ್ ಅಮ್ಚ್ಯಾ ವಾಂಗ್ಡಾ ಘೆವ್ನ್ ಜಾವ್ಕ್ ಅಮ್ಕಾ ಹಕ್ಕ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:5
25 ತಿಳಿವುಗಳ ಹೋಲಿಕೆ  

ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).


ಯೇಸುವು ಪೇತ್ರನ ಮನೆಗೆ ಹೋದನು. ಅಲ್ಲಿ ಪೇತ್ರನ ಅತ್ತೆಯು ಬಹಳ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದನ್ನು ಯೇಸು ನೋಡಿದನು.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.


ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಆ ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.


ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ.


ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.


ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.


ವೃದ್ಧ ಸ್ತ್ರೀಯರನ್ನು ತಾಯಿಗಳಂತೆಯೂ ಯೌವನಸ್ಥೆಯರನ್ನು ಸಹೋದರಿಯರಂತೆಯೂ ಪರಿಗಣಿಸು. ಯಾವಾಗಲೂ ಅವರೊಡನೆ ಒಳ್ಳೆಯ ರೀತಿಯಲ್ಲಿ ನಡೆದುಕೊ.


ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;


ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.


ಅಂದರೆ, ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, “ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, “ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.


ಕ್ರಿಸ್ತನಲ್ಲಿ ನಮ್ಮ ಸಹೋದರಿಯಾದ ಪೊಯಿಬೆಯನ್ನು ನಾನು ನಿಮಗೆ ಶಿಫಾರಸು ಮಾಡಲಿಚ್ಛಿಸುತ್ತೇನೆ. ಈಕೆಯು ಕೆಂಕ್ರೆಯ ಪಟ್ಟಣದ ಸಭೆಯಲ್ಲಿ ವಿಶೇಷ ಸಹಾಯಕಳಾಗಿದ್ದಾಳೆ.


ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್‌ನಲ್ಲಿ ಕೆಲವು ದಿನ ತಂಗಿದ್ದರು.


ಮತ್ತಾಯ, ತೋಮ, ಯಾಕೋಬ (ಅಲ್ಫಾಯನ ಮಗ) ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,


ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.


ಸೀಮೋನನ ಅತ್ತೆ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದಳು. ಅಲ್ಲಿನ ಜನರು ಅವಳ ಬಗ್ಗೆ ಯೇಸುವಿಗೆ ಹೇಳಿದರು.


ಇವನು ಕೇವಲ ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳು. ಯಾಕೋಬ, ಯೋಸೇಫ, ಸಿಮೋನ ಮತ್ತು ಯೂದ ಇವನ ಸಹೋದರರು.


ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ.


ಜನರು ಮದುವೆಮಾಡಿಕೊಳ್ಳಬಾರದೆಂದೂ ಕೆಲವು ಆಹಾರಪದಾರ್ಥಗಳನ್ನು ತಿನ್ನಬಾರದೆಂದೂ ಅವರು ಹೇಳುತ್ತಾರೆ. ಆದರೆ ನಂಬಿಕೆಯುಳ್ಳವರು ಮತ್ತು ಸತ್ಯವನ್ನು ತಿಳಿದಿರುವವರು ಕೃತಜ್ಞತಾಸ್ತುತಿ ಮಾಡಿ ಆ ಆಹಾರಪದಾರ್ಥಗಳನ್ನು ತಿನ್ನಲಿ. ಏಕೆಂದರೆ ಅವುಗಳನ್ನು ನಿರ್ಮಿಸಿದಾತನು ದೇವರೇ.


ವಿವಾಹವಾಗಿಲ್ಲದ ಜನರಿಗೆ ಮತ್ತು ವಿಧವೆಯರಿಗೆ ನಾನು ಹೇಳುವುದೇನೆಂದರೆ: ಅವರು ನನ್ನಂತೆ ಒಬ್ಬಂಟಿಗರಾಗಿ ಇರುವುದೇ ಅವರಿಗೆ ಒಳ್ಳೆಯದು.


“ನಿನ್ನ ತಾಯಿ ಮತ್ತು ತಮ್ಮಂದಿರು ಹೊರಗೆ ನಿಂತಿದ್ದಾರೆ. ಅವರು ನಿನ್ನನ್ನು ನೋಡಬೇಕೆಂದಿದ್ದಾರೆ” ಎಂದು ಯೇಸುವಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು