Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:7 - ಪರಿಶುದ್ದ ಬೈಬಲ್‌

7 ತಾವು ಧರ್ಮೋಪದೇಶಕರಾಗಬೇಕೆಂಬುದು ಅವರ ಅಪೇಕ್ಷೆ. ಆದರೆ ತಾವು ಏನು ಮಾತಾಡುತ್ತಿದ್ದೇವೆ ಎಂಬುದೇ ಅವರಿಗೆ ತಿಳಿದಿಲ್ಲ. ತಮಗೆ ಖಚಿತವಾಗಿ ತಿಳಿದಿದೆ ಎಂದು ತಾವು ಹೇಳುವ ಸಂಗತಿಗಳನ್ನೂ ಅವರು ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಮ್ಮ ಮಾತಿನ ಅರ್ಥವಾಗಲಿ, ತಮ್ಮ ವಾದದ ತಿರುಳಾಗಲಿ ಅವರಿಗೆ ತಿಳಿಯದಿದ್ದರೂ ಅವರು ಧರ್ಮೋಪದೇಶಕರಾಗಲು ಹವಣಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಧರ್ಮೋಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲಿ ತಾವು ದೃಢವಾಗಿ ಮಾತಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಂಚ್ಯಾ ದೆವಾಚ್ಯಾ ನೆಮಾಂಚಿ ಮಾಸ್ತರಾ ಹೊತಲಿ ಆಶಾ ಹಾಯ್ ಅನಿ ತೆನಿ ಮಾಸ್ತರಾ ಹೊವ್ಕ್ ಬಿ ಬಗ್ತ್ಯಾತ್ , ಖರೆ ತೆನಿ ಅಪ್ನಿ ಗೊಸ್ಟಿಯಾ ಅಪ್ನಿಚ್ ಸಮ್ಜುನ್ ಘೆಯ್‌ನ್ಯಾತ್, ನಾ ತರ್ ಖಲ್ಯಾ ವಿಶಯಾಸಾಟ್ನಿ ತೆನಿ ಮೊಟ್ಯಾ ವಿಶ್ವಾಸಾನ್ ಸಾಂಗುನ್ ಘೆತಾತ್ ತೆ ಬಿ ತೆನಿ ಸಮ್ಜುನ್ ಘೆಯ್‌ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:7
20 ತಿಳಿವುಗಳ ಹೋಲಿಕೆ  

ಜನರು ತಮ್ಮನ್ನು ಜ್ಞಾನಿಗಳೆಂದು ಹೇಳಿಕೊಂಡು ಮೂರ್ಖರಾದರು.


ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು.


ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.


ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.


ಆ ಸ್ತ್ರೀಯರು ಯಾವಾಗಲೂ ಹೊಸ ಉಪದೇಶಗಳನ್ನು ಕಲಿಯಲು ಪ್ರಯತ್ನಿಸಿದರೂ ಸತ್ಯವನ್ನು ಪೂರ್ಣವಾಗಿ ಅರ್ಥಮಾಡಿಕೊಳ್ಳಲು ಅವರಿಗೆ ಸಾಧ್ಯವೇ ಇಲ್ಲ.


ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.


ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.


ಬಳಿಕ ಅವರು, “ಯೋಹಾನನಿಗೆ ಎಲ್ಲಿಂದ ಅಧಿಕಾರ ಬಂದಿತೋ ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಆಗ ಯೇಸು, “ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆ ಎಂಬುದನ್ನು ನಾನು ಸಹ ನಿಮಗೆ ಹೇಳುವುದಿಲ್ಲ” ಎಂದನು.


ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು.


ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು