Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:9 - ಪರಿಶುದ್ದ ಬೈಬಲ್‌

9 ಧರ್ಮಶಾಸ್ತ್ರವನ್ನು ರೂಪಿಸಿದ್ದು ಒಳ್ಳೆಯವರಿಗಾಗಿಯಲ್ಲ ಎಂಬುದು ನಮಗೆ ತಿಳಿದಿದೆ. ಅದನ್ನು ರೂಪಿಸಿದ್ದು ಅದರ ವಿರುದ್ಧವಾಗಿ ನಡೆಯುವ ಮತ್ತು ಅದನ್ನು ಅನುಸರಿಸಲು ಒಪ್ಪದಿರುವ ಜನರಿಗಷ್ಟೇ. ದೇವರಿಗೆ ವಿರುದ್ಧವಾದ ಜನರಿಗೆ ಮತ್ತು ಪಾಪಿಷ್ಠರಿಗೆ, ಅಧರ್ಮಿಗಳಿಗೆ ಮತ್ತು ಪರಿಶುದ್ಧರಲ್ಲದವರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ ಮತ್ತು ಕೊಲೆಗಾರರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹೆ ಖರೆಬಿ ಯಾದ್ ಥವ್ನ್ ಘೆವ್ಚೆ, ನಿಯಾಮಾ ಬರ್‍ಯಾ ಲೊಕಾಂಚ್ಯಾ ಸಾಟ್ನಿ ನ್ಹಯ್, ಜೆ ಕೊನ್ ನಿಯಾಮಾ ಮೊಡ್ತಾ ತೆಚೆಸಾಟ್ನಿ ಅನಿ ಚುಕ್ ಕರಲ್ಲ್ಯಾಂಚ್ಯಾ ಸಾಟ್ನಿ, ದೆವಸ್ಪಾನ್ ನಸಲ್ಲ್ಯಾಂಚ್ಯಾಸಾಟ್ನಿ ಅನಿ ಪಾಪಾತ್ ಹೊತ್ತ್ಯಾಂಚ್ಯಾಸಾಟ್ನಿ, ಜೆ ಕೊನ್ ಅಶುದ್ದ್ ರ್‍ಹಾತಾ ತೆಂಚ್ಯಾಸಾಟ್ನಿ, ಅಪ್ನಾಚ್ಯಾ ಬಾಯ್ಚೊ ನಾ ತರ್ ಬಾಬಾಚೊ ಜಿವ್ ಕಾಡ್ತಲ್ಯಾಂಚ್ಯಾಸಾಟಿ, ಜೆ ಕೊನ್ ಲೊಕಾಕ್ನಿ ಜಿವಾನಿ ಮಾರ್‍ತ್ಯಾತ್ ತೆಂಚೆಸಾಟ್ನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:9
45 ತಿಳಿವುಗಳ ಹೋಲಿಕೆ  

ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.


“ನೀತಿವಂತನೇ ರಕ್ಷಣೆ ಹೊಂದಲು ಕಷ್ಟವಾದರೆ, ಭಕ್ತಿಹೀನನ ಮತ್ತು ಪಾಪಿಷ್ಠನ ಗತಿಯೇನು?”


ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.


ಸಾಧುತ್ವ, ಇಂದ್ರಿಯ ನಿಗ್ರಹ ಇಂಥವುಗಳೇ. ಇವುಗಳನ್ನು ತಪ್ಪೆಂದು ಯಾವ ಧರ್ಮಶಾಸ್ತ್ರವೂ ಹೇಳುವುದಿಲ್ಲ.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ.


ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.


ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.


ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು.


“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.


ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”


“ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಇದು ಯೆಹೋವನಿಂದ ಬಂದ ಸಂದೇಶ.


ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.


ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ.


ಕೆಲವರು ತಮ್ಮ ತಂದೆತಾಯಿಗಳಿಂದ ಕದ್ದುಕೊಂಡು, “ಅದು ತಪ್ಪಲ್ಲ” ಎಂದು ಹೇಳುವರು. ಆದರೆ ಆ ವ್ಯಕ್ತಿಯು ಮನೆಯೊಳಗೆ ನುಗ್ಗಿ ಸರ್ವಸ್ವವನ್ನು ನಾಶಮಾಡುವ ವ್ಯಕ್ತಿಯಂತೆಯೇ ಕೆಟ್ಟವನಾಗಿದ್ದಾನೆ.


ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.


ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನ ಜೀವಿತವು ಕತ್ತಲೆಯಲ್ಲಿ ಆರಿಹೋದ ದೀಪದಂತೆ ಕೊನೆಗೊಳ್ಳುವುದು.


ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.


ಸನ್ಹೇರೀಬನು ಒಂದು ದಿನ ತನ್ನ ದೇವರಾದ ನಿಸ್ರೋಕನನ್ನು ಆಲಯದಲ್ಲಿ ಆರಾಧಿಸುತ್ತಿದ್ದನು. ಅವನ ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅವನನ್ನು ಖಡ್ಗದಿಂದ ಇರಿದುಕೊಂದರು. ನಂತರ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಸನ್ಹೇರೀಬನ ಮಗನಾದ ಏಸರ್‌ಹದ್ದೋನನು ಅವನ ನಂತರ ಹೊಸ ರಾಜನಾದನು.


ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.


“ಲೇವಿಯರು, ‘ತಂದೆತಾಯಿಗಳನ್ನು ಸನ್ಮಾನಿಸದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ.


ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


“ನೀವು ಯಾರನ್ನೂ ಕೊಲೆ ಮಾಡಬಾರದು.


ನಂಬಿಕೆಯುಳ್ಳ ಜನರಾದ ನಿಮಗೆ ಆ ಕಲ್ಲು (ಯೇಸು) ಹೆಚ್ಚು ಬೆಲೆಯುಳ್ಳದ್ದು. ಆದರೆ ನಂಬದ ಜನರಿಗೆ ಆತನು ಇಂತೆಂದಿದ್ದಾನೆ: “ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.”


ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.


ಮತ್ಸರ, ಕುಡಿಕತನ ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ಆದರೆ ನೀವು ನಿಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಟ್ಟರೆ ನೀವು ಧರ್ಮಶಾಸ್ತ್ರದ ಅಧೀನದಲ್ಲಿಲ್ಲ.


ದೇವರ ಸತ್ಯಕ್ಕೆ ಹೊಂದಿಕೆಯಾಗದ ಕ್ಷುಲ್ಲಕ ಕಥೆಗಳನ್ನು ಜನರು ಹೇಳುತ್ತಾರೆ. ಆ ಕಥೆಗಳ ಬೋಧನೆಯನ್ನು ಅನುಸರಿಸಬೇಡ. ದೇವರಿಗೆ ನಿಜವಾದ ಸೇವೆ ಮಾಡಲು ನಿನಗೆ ನೀನೇ ಬೋಧಿಸಿಕೊ.


ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.


ದೇವರಿಂದ ಬಂದಿಲ್ಲದ ನಿರರ್ಥಕ ಸಂಗತಿಗಳನ್ನು ಮಾತನಾಡುವ ಜನರಿಂದ ದೂರವಾಗಿರು. ಆ ರೀತಿಯ ಮಾತುಗಳು ಜನರನ್ನು ದೇವರಿಂದ ಮತ್ತಷ್ಟು ದೂರ ಮಾಡುತ್ತವೆ.


ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;


ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.


ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.


ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು