Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:2 - ಪರಿಶುದ್ದ ಬೈಬಲ್‌

2 ನಮ್ಮಲ್ಲಿ ಶಾಂತಿ ಸಮಾಧಾನಗಳು ನೆಲಸಿ ನಾವು ದೇವರನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಆರಾಧಿಸಲು ಸಾಧ್ಯವಾಗುವಂತೆ ಅರಸರಿಗಾಗಿಯೂ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತರಾಗಿ ಶಾಂತಿಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಸಗ್ಳ್ಯಾ ರಿತಿನ್ ದೆವಾಕ್ ಬರೆ ದಿಸ್ತಲೆ ಶಾಂತ್ ಅನಿ ಸಮಾದಾನಾಚೆ ಜಿವನ್ ಕರುಕ್ ಹೊಯ್ ಸರ್ಕೆ ರಾಜಾಂಚ್ಯಾ ಅನಿ ಸಗ್ಳ್ಯಾ ಅದಿಕಾರ್‍ಯಾಂಚ್ಯಾಸಾಟ್ನಿ ಮಾಗ್ನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:2
22 ತಿಳಿವುಗಳ ಹೋಲಿಕೆ  

ಅವುಗಳನ್ನು ಜೆರುಸಲೇಮಿನ ಯಾಜಕರಿಗೆ ಕೊಡಿರಿ. ಅವುಗಳನ್ನು ಯಜ್ಞವಾಗಿ ಸಮರ್ಪಿಸಿದಾಗ ಪರಲೋಕದ ದೇವರು ಅದನ್ನು ಮೆಚ್ಚುವನು. ಯಾಜಕರು ನನಗಾಗಿಯೂ ನನ್ನ ಮಕ್ಕಳಿಗಾಗಿಯು ಪ್ರಾರ್ಥಿಸಲಿ.


ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”


ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ.


ಶಾಂತಿಯಿಂದ ಜೀವಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ನಿಮ್ಮ ಸ್ವಂತ ವ್ಯವಹಾರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಿ. ನಿಮ್ಮ ಕೈಯಾರೆ ಕೆಲಸ ಮಾಡಬೇಕೆಂದು ನಾವು ಈಗಾಗಲೇ ನಿಮಗೆ ಹೇಳಿದ್ದೇವೆ.


ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.


ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು.


ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.


ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.


ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.


ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶಮಾಡುವುದು ಸರಿಯೋ?” ಎಂದು ಕೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು