Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:5 - ಪರಿಶುದ್ದ ಬೈಬಲ್‌

5 ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಏಕಂದರೆ ದೇವರು ಒಬ್ಬನೇ; ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ಲೊಚ್ ದೆವ್ ಹಾಯ್, ಅನಿ ಮಾನ್ಸಾಕ್ನಿ, ಅನಿ ದೆವಾಕ್ ಎಕ್‍ಕ್ಡೆ ಕರ್‍ತಲೊ ತೊ ಮಾನುಸ್ ಎಕ್ಲೊಚ್ ತೊಚ್ ಕ್ರಿಸ್ತ್ ಜೆಜು ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:5
28 ತಿಳಿವುಗಳ ಹೋಲಿಕೆ  

ಒಂದೇ ಪಕ್ಷವಿದ್ದರೆ ಮಧ್ಯಸ್ತನು ಬೇಕಿಲ್ಲ. ದೇವರು ಒಬ್ಬನೇ.


ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.


ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


“ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ.


ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಸಮಸ್ತವನ್ನೂ ಆಳುತ್ತಾನೆ. ಆತನು ಸರ್ವವ್ಯಾಪಿಯಾಗಿದ್ದಾನೆ ಮತ್ತು ಎಲ್ಲರಲ್ಲಿ ವಾಸಿಸುವವನಾಗಿದ್ದಾನೆ.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ನಮ್ಮಿಬ್ಬರಿಗೆ ಮಧ್ಯಸ್ಥಗಾರನಿದ್ದರೆ, ನಮ್ಮಿಬ್ಬರ ಮೇಲೆ ಅಧಿಕಾರವುಳ್ಳವನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. (ಆದರೆ ಅಂಥವರು ಯಾರೂ ಇಲ್ಲ.)


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಆ ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ರಕ್ಷಣೆಯು ಯೇಸುವಿನಿಂದಲ್ಲದೆ ಬೇರೆ ಯಾರಲ್ಲಿಯೂ ಸಿಕ್ಕುವುದಿಲ್ಲ. ಆತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ದೇವರ ಮಗನೂ ನಮ್ಮ ಪ್ರಭುವೂ ಆಗಿರುವ ಯೇಸು ಕ್ರಿಸ್ತನ ವಿಷಯವೇ ಆ ಸುವಾರ್ತೆ. ಮನುಷ್ಯತ್ವದ ಮಟ್ಟಿಗೆ ಆತನು ದಾವೀದನ ಕುಟುಂಬದಲ್ಲಿ ಹುಟ್ಟಿದನು. ಆದರೆ ಯೇಸು ಪರಿಶುದ್ಧ ಆತ್ಮನ ಮೂಲಕ ಮಹಾಶಕ್ತಿಯೊಡನೆ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದು ತಾನೇ ದೇವರ ಮಗನೆಂಬುದನ್ನು ತೋರಿಸಿಕೊಟ್ಟನು.


ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.


“ತರುವಾಯ ಆ ಸೇವಕನು ಬಂದು, ‘ಸ್ವಾಮೀ, ನೀನು ಹೇಳಿದಂತೆಯೇ ಮಾಡಿದೆನು. ಆದರೆ ನಮ್ಮಲ್ಲಿ ಇನ್ನೂ ಹೆಚ್ಚು ಜನರಿಗೆ ಸ್ಥಳವಿದೆ.’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು