Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:7 - ಪರಿಶುದ್ದ ಬೈಬಲ್‌

7 ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಹೆಚ್ಯಾಚ್ ಸಾಟ್ನಿ ವಿಶ್ವಾಸಾಚಿ ಬರಿ ಖಬರ್ ಅನಿ ಖರೆಪಾನಾಚ್ಯಾ ವಿಶಯಾತ್ ಸಾಂಗುಕ್ ಮನುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ತೆಂಕಾ ಸಿಕ್ವುತಲೊ ಅನಿ ಎಕ್ ಅಪೊಸ್ತಲ್ ಕರುನ್ ಮಾಕಾ ಧಾಡಲ್ಲೆ ಹಾಯ್. ಮಿಯಾ ಝುಟೆ ಸಾಂಗಿನಾ ಹೊಲಾ; ಜೆ ಕಾಯ್ ಖರೆ ಹಾಯ್ ತೆಚ್ ಮಿಯಾ ಸಾಂಗುಕ್ ಲಾಗ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:7
27 ತಿಳಿವುಗಳ ಹೋಲಿಕೆ  

ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು.


ನಾನು ಕ್ರಿಸ್ತನಲ್ಲಿದ್ದೇನೆ ಮತ್ತು ನಿಮಗೆ ಸತ್ಯವನ್ನೇ ಹೇಳುತ್ತಿದ್ದೇನೆ. ನಾನು ಸುಳ್ಳಾಡುವುದಿಲ್ಲ. ನನ್ನ ಆಲೋಚನೆಗಳು ಪವಿತ್ರಾತ್ಮನ ಆಳ್ವಿಕೆಗೆ ಒಳಪಟ್ಟಿವೆ. ನನ್ನ ಮನಸ್ಸೇ ಇದಕ್ಕೆ ಸಾಕ್ಷಿ.


ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.


ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.


ನಾನು ಬರೆಯುತ್ತಿರುವ ಈ ಸಂಗತಿಗಳು ಸುಳ್ಳಲ್ಲವೆಂದು ದೇವರಿಗೆ ಗೊತ್ತಿದೆ.


ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.


ಈಗ ನಾನು ಯೆಹೂದ್ಯರಲ್ಲದ ಜನರೊಂದಿಗೆ ಮಾತಾಡುತ್ತಿದ್ದೇನೆ. ನಾನು ಅವರಿಗೆ ಅಪೊಸ್ತಲನಾಗಿದ್ದೇನೆ. ಆದ್ದರಿಂದ ನಾನು ಈ ಕೆಲಸವನ್ನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿಯೇ ಮಾಡುತ್ತೇನೆ.


ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಈ ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಆ ಜನರಿಗೆ ತಿಳಿಸಿದವನೇ ನೋಹ.


ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು.


ನಾನು ಸುಳ್ಳು ಹೇಳುತ್ತಿಲ್ಲವೆಂದು ದೇವರಿಗೆ ಗೊತ್ತಿದೆ. ಆತನು ಪ್ರಭು ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿದ್ದಾನೆ. ಆತನಿಗೆ ಸದಾಕಾಲ ಸ್ತೋತ್ರ ಸಲ್ಲಿಸಬೇಕು.


ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


“ಆದರೆ ಯೇಸು ನನಗೆ, ‘ಈಗ ಹೊರಡು, ಬಹುದೂರದಲ್ಲಿರುವ ಯೆಹೂದ್ಯರಲ್ಲದ ಜನರ ಬಳಿಗೆ ನಾನು ನಿನ್ನನ್ನು ಕಳುಹಿಸುವೆನು’ ಎಂದು ಹೇಳಿದನು.”


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?


ಪ್ರಸಂಗಿಯು ಹೀಗೆನ್ನುತ್ತಾನೆ: “ಒಂದು ತೀರ್ಮಾನಕ್ಕೆ ಬರಬೇಕೆಂದು ಇವೆಲ್ಲವುಗಳನ್ನು ಒಟ್ಟಾಗಿ ಸೇರಿಸಿದೆ. ಆದರೂ ಒಂದು ತೀರ್ಮಾನಕ್ಕೆ ಬರಲಾಗುತ್ತಿಲ್ಲ. ಆದರೆ ನಾನು ಒಂದನ್ನು ಕಂಡುಕೊಂಡೆ. ಅದೇನೆಂದರೆ, ಸಾವಿರ ಪುರುಷರಲ್ಲಿ ಒಬ್ಬ ನೀತಿವಂತನು ಇದ್ದರೂ ಇರಬಹುದು; ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ನೀತಿವಂತಳನ್ನೂ ನಾನು ಕಾಣಲಿಲ್ಲ.


ಪ್ರಸಂಗಿಯಾದ ನಾನು ಜೆರುಸಲೇಮಿನಲ್ಲಿ ಇಸ್ರೇಲರಿಗೆ ರಾಜನಾಗಿದ್ದೆನು.


ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ. ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ.


ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.


ನಾನು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಖಂಡಿತವಾಗಿ ಜ್ಞಾಪಿಸಿಕೊಳ್ಳುತ್ತೇನೆ. ಇದು ಸತ್ಯವೆಂದು ದೇವರಿಗೆ ಗೊತ್ತಿದೆ. ದೇವರ ಮಗನ ವಿಷಯವಾದ ಸುವಾರ್ತೆಯನ್ನು ಜನರಿಗೆ ಸಾರುವುದರ ಮೂಲಕ ನಾನು ದೇವರನ್ನು ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ. ದೇವರ ಚಿತ್ತದಿಂದ, ನಿಮ್ಮ ಬಳಿಗೆ ಬರಲು ಅವಕಾಶವಾಗಬೇಕೆಂದು ಪ್ರಾರ್ಥಿಸುತ್ತೇನೆ.


ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು