Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:6 - ಪರಿಶುದ್ದ ಬೈಬಲ್‌

6 ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು; ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಹೊಸದಾಗಿ ವಿಶ್ವಾಸಕ್ಕೆ ಬಂದವನಾಗಿರಬಾರದು. ಅಂಥವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಬಲಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕ್ರಿಸ್ತಾಂವ್ ವಿಶ್ವಾಸಾತ್ ಜಾನ್ತೊ ಹೊಲ್ಲೊ ಅನ್‍ಬೊಗ್ ಹೊತ್ತೊ ಮಾನುಸ್ ರ್‍ಹಾವ್ಚೊ, ಅಶೆ ಗಿರೊ ಸರ್ಕೆ ಗರುಕಿ ಕರುನ್ ತೆನಿ ಚುಕೆತ್ ಪಡುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:6
24 ತಿಳಿವುಗಳ ಹೋಲಿಕೆ  

ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಹೊಸದಾಗಿ ಹುಟ್ಟಿದ ಕೂಸುಗಳಂತಿರಿ. ನಿಮ್ಮ ಆತ್ಮವನ್ನು ಪೋಷಿಸುವಂಥ ಶುದ್ಧ ಹಾಲನ್ನು (ದೇವರ ವಾಕ್ಯವೆಂಬ) ಬಯಸಿರಿ. ನೀವು ಅದನ್ನು ಕುಡಿಯುವುದರಿಂದ ಬೆಳವಣಿಗೆ ಹೊಂದಿ ರಕ್ಷಿಸಲ್ಪಡುವಿರಿ.


ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ಸಹೋದರ ಸಹೋದರಿಯರೇ, ನಾನು ಆತ್ಮಿಕ ಜನರೊಂದಿಗೆ ಮಾತಾಡುವಂತೆ ಮೊದಲು ನಿಮ್ಮೊಂದಿಗೆ ಮಾತಾಡಲಾಗಲಿಲ್ಲ. ಪ್ರಾಪಂಚಿಕರೂ ಕ್ರಿಸ್ತನಲ್ಲಿ ಎಳೆಕೂಸುಗಳೂ ಆಗಿರುವಂಥವರೊಂದಿಗೆ ಮಾತಾಡುವಂತೆ ನಾನು ನಿಮ್ಮೊಂದಿಗೆ ಮಾತಾಡಬೇಕಾಯಿತು.


ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.


ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.


ಗರ್ವಿಯು ಬೇಗನೆ ಹಾಳಾಗುವನು; ದೀನನಾದರೋ ಸನ್ಮಾನವನ್ನು ಹೊಂದುವನು.


ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.


ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.


ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.


ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ;


ಯೇಸು ಅವರಿಗೆ, “ಸೈತಾನನು ಮಿಂಚಿನೋಪಾದಿಯಲ್ಲಿ ಆಕಾಶದಿಂದ ಕೆಳಗೆ ಬೀಳುವುದನ್ನು ನಾನು ನೋಡಿದೆನು.


ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.


ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು