Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:14 - ಪರಿಶುದ್ದ ಬೈಬಲ್‌

14 ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನಲ್ಲಿರುವ ವರವನ್ನು ಅಲಕ್ಷ್ಯ ಮಾಡಬೇಡ. ಅದು ಸಭೆಯ ಹಿರಿಯರು ಪ್ರವಾದನೆಯ ಮೂಲಕ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ನಿನಗೆ ಕೊಡಲಾಯಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಜ್ಯಾ ಭುತ್ತುರ್ ಹೊತ್ತ್ಯಾ ತಾಂಡ್ಯಾಚ್ಯಾ ವ್ಹಡಿಲಾನಿ, ಅನಿ ಪ್ರವಾದ್ಯಾನಿ ತುಜ್ಯಾ ವರ್‍ತಿ ಹಾತ್ ಥವ್ನ್ ದಿಲ್ಲ್ಯಾ ಆತ್ಮಿಕ್ ರಿತಿಚ್ಯಾ ದೆನ್ಗಿಚಿ ಪರ್ವಾ ಕರಿನಸ್ತಾನಾ ರ್‍ಹಾವ್‍ನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:14
18 ತಿಳಿವುಗಳ ಹೋಲಿಕೆ  

ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.


ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ನಾನು ನಿನಗೆ ಆಜ್ಞಾಪಿಸುವುದೇನೆಂದರೆ, ಮೊದಲು ನಿನ್ನ ವಿಷಯದಲ್ಲಿ ತಿಳಿಸಲಾದ ಪ್ರವಾದನೆಗಳಿಗೆ ಅನುಗುಣವಾಗಿ ನಂಬಿಕೆಯ ದಿವ್ಯ ಹೋರಾಟವನ್ನು ಮಾಡು.


ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ಪವಿತ್ರಾತ್ಮನ ಕಾರ್ಯವನ್ನು ನಂದಿಸಬೇಡಿ.


ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.


ಈ ಇಬ್ಬರು ಅಪೊಸ್ತಲರು ಅವರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮನನ್ನು ಹೊಂದಿಕೊಂಡರು.


ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.


ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.


“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.


ಈ ಕಾರ್ಯಗಳನ್ನು ಮಾಡುತ್ತಲೇ ಇರು. ಈ ಕಾರ್ಯಗಳನ್ನು ಮಾಡಲು ನಿನ್ನ ಜೀವನವನ್ನು ಮುಡಿಪಾಗಿಡು. ಆಗ ನಿನ್ನ ಕಾರ್ಯವು ಅಭಿವೃದ್ಧಿಗೊಳ್ಳುತ್ತಿರುವುದನ್ನು ಜನರೆಲ್ಲರೂ ನೋಡುವರು.


ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.


ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.


ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು