Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:17 - ಪರಿಶುದ್ದ ಬೈಬಲ್‌

17 ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ಪ್ರಸಂಗದಲ್ಲಿಯೂ ಉಪದೇಶದಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮುಖಂಡಾ ಹೊವ್ನ್ ಬರಿ ಕಾಮಾ ಕರ್‍ತಲ್ಯಾ ಜಾನ್ತ್ಯಾ ಲೊಕಾಂಚಿ ಮಜುರಿ ದೊನ್‍ಪಟ್ ಹೊವ್ಚಿ, ಲೈ ಕರುನ್ ತೆಂಚಿ, ಜೆ ಕೊನ್ ಪ್ರಚಾರ್ ಕರ್‍ತಲ್ಯಾತ್ ಅನಿ ಶಿಕ್ವುತಲ್ಯಾತ್ ಘಟ್‍ಮುಟ್ ರಿತಿನ್ ಕಾಮ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:17
41 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.


ಆ ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಆ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ.


ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು.


ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ.


ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.


ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ತ್ರುಫೈನಳಿಗೂ ತ್ರುಫೋಸಳಿಗೂ ನನ್ನ ವಂದನೆ ತಿಳಿಸಿರಿ. ಅವರು ಪ್ರಭುವಿಗಾಗಿ ಬಹು ಕಷ್ಟಪಟ್ಟು ಸೇವೆ ಮಾಡುತ್ತಿದ್ದಾರೆ. ನನ್ನ ಪ್ರಿಯ ಸಹೋದರಿಯಾದ ಪೆರ್ಸೀಸಳಿಗೂ ನನ್ನ ವಂದನೆ ತಿಳಿಸಿರಿ. ಆಕೆಯು ಸಹ ಪ್ರಭುವಿಗೋಸ್ಕರ ಬಹು ಕಷ್ಟಪಟ್ಟು ಸೇವೆ ಮಾಡಿದಳು.


ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಸ್ವಂತ ಇಷ್ಟದಿಂದಲೇ ಈ ಕಾರ್ಯವನ್ನು ಮಾಡಿದ್ದಾರೆ. ಅದು ಅವರ ಕರ್ತವ್ಯವೂ ಹೌದು. ಯೆಹೂದ್ಯರಲ್ಲದ ಅವರು ಯೆಹೂದ್ಯರ ಆತ್ಮಿಕ ಅಶೀರ್ವಾದಗಳಲ್ಲಿ ಪಾಲು ಹೊಂದಿರುವುದರಿಂದ ಅವರು ತಮ್ಮಲ್ಲಿರುವಂಥವುಗಳ ಮೂಲಕ ಅವರಿಗೆ ನೆರವು ನೀಡುವುದು ಅವರ ಹೊಣೆಯಾಗಿದೆ.


ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.


ಈ ರೀತಿಯ ಮುಂದಾಳುಗಳನ್ನು ಮತ್ತು ಅವರೊಂದಿಗೆ ಕೆಲಸ ಮಾಡುವವರನ್ನು ಹಾಗೂ ಸೇವೆ ಮಾಡುವವರನ್ನು ಹಿಂಬಾಲಿಸಿರಿ.


ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.


ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.


(ತನ್ನ ಸ್ವಂತ ಕುಟುಂಬವನ್ನು ಆಳಲು ತಿಳಿಯದವನು ದೇವರ ಸಭೆಯನ್ನು ಪರಾಮರಿಸಲು ಸಮರ್ಥನಲ್ಲ.)


ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.


ಅದು ಸಂಭವಿಸುವುದಕ್ಕೆ ಮುಂಚೆಯೇ ನಾನು ಅದರ ವಿಷಯವಾಗಿ ನಿಮಗೆ ಎಚ್ಚರಿಕೆ ಕೊಟ್ಟಿದ್ದೇನೆ.


ನಿಮ್ಮ ಸಭಾನಾಯಕರಿಗೆಲ್ಲ ಮತ್ತು ದೇವಜನರಿಗೆಲ್ಲ ನಮ್ಮ ವಂದನೆಗಳನ್ನು ತಿಳಿಸಿ. ಇಟಲಿಯ ದೇವಜನರೆಲ್ಲರೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.


ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.


ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.


ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.


ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ದಿಕ್ಕಿಲ್ಲದ ವಿಧವೆಯರನ್ನು ಪರಿಪಾಲಿಸು.


ಅಲ್ಲಿರುವ ಸಹೋದರ ಸಹೋದರಿಯರಿಗೆ ಈ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.


ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.


ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.


ಉಳಿದದ್ದನ್ನು ನೀವು ಮತ್ತು ನಿಮ್ಮ ಕುಟುಂಬದವರು ಎಲ್ಲಿ ಬೇಕಾದರೂ ತಿನ್ನಬಹುದು. ನೀವು ದೇವದರ್ಶನಗುಡಾರದಲ್ಲಿ ಮಾಡುವ ಕೆಲಸಕ್ಕೆ ಇದು ನಿಮಗೆ ಪ್ರತಿಫಲವಾಗಿದೆ.


ಆ ಲೇವಿಯನು ಇತರ ಲೇವಿಯರೊಂದಿಗೆ ಸಮಾನ ಪಾಲನ್ನು ಹೊಂದುವನು. ಇದಲ್ಲದೆ ಅವನ ಕುಟುಂಬದವರು ಯಥಾಪ್ರಕಾರ ತಮಗೆ ಬರತಕ್ಕ ಪಾಲನ್ನೂ ಹೊಂದುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು