Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:19 - ಪರಿಶುದ್ದ ಬೈಬಲ್‌

19 ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಭಾಹಿರಿಯರ ವಿರುದ್ಧ ಯಾರಾದರೂ ದೂರು ತಂದರೆ, ಇಬ್ಬರ ಅಥವಾ ಮೂವರ ಸಾಕ್ಷಿ ಇಲ್ಲದೆ ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಮನಸ್ಸಿಗೆ ತೆಗೆದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ, ಇಬ್ಬರ ಇಲ್ಲವೆ ಮೂವರ ಸಾಕ್ಷಿ ಇಲ್ಲದೆ ಅದನ್ನು ಅಂಗೀಕರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಎಕ್ ವಡಿಲ್ ಮಾನ್ಸಾ ವರ್‍ತಿ ಘಾಟಲ್ಲೊ ಅಪ್ವಾದ್ ದೊಗಾನಿ ನಾ ಹೊಲ್ಯಾರ್ ತಿಗಾನಿ ಸಾಂಗ್ಲ್ಯಾ ಸಿವಾಯ್ ಒಪ್ಪುನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:19
14 ತಿಳಿವುಗಳ ಹೋಲಿಕೆ  

ಆದರೆ ಅವನು ನಿನ್ನ ಮಾತನ್ನು ಕೇಳದಿದ್ದರೆ, ನಿನ್ನೊಂದಿಗೆ ಒಬ್ಬಿಬ್ಬರನ್ನು ಕರೆದುಕೊಂಡು ಮತ್ತೆ ಅವನ ಬಳಿಗೆ ಹೋಗು. ಆಗ ಪ್ರತಿಯೊಂದು ದೂರಿನ ವಿಷಯದಲ್ಲೂ ಇಬ್ಬರು ಅಥವಾ ಮೂವರು ಸಾಕ್ಷಿಗಳಿರುವರು.


“ಒಬ್ಬನು ಕಟ್ಟಳೆಗಳಿಗೆ ವಿರುದ್ಧವಾಗಿ ನಡೆದುಕೊಂಡು ಅಪಾದಿಸಲ್ಪಟ್ಟದ್ದಲ್ಲಿ ಒಬ್ಬನ ಸಾಕ್ಷಿಯಿಂದ ಅವನು ತಪ್ಪಿತಸ್ಥನೆಂದು ತೀರ್ಮಾನಿಸಬಾರದು. ಅವನು ತಪ್ಪಿತಸ್ಥನೆಂದು ತೋರಿಸಲು ಎರಡು ಅಥವಾ ಮೂರು ಸಾಕ್ಷಿಗಳಿರಬೇಕು.


ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.


ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.


ಅವರು ವಿಗ್ರಹಾರಾಧನೆ ಮಾಡಿದ್ದಕ್ಕೆ ಒಂದೇ ಸಾಕ್ಷಿ ಇರುವುದಾದರೆ ಅವರಿಗೆ ಮರಣಶಿಕ್ಷೆಯಾಗಬಾರದು. ಆದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳು ಅವರು ವಿಗ್ರಹಾರಾಧನೆ ಮಾಡಿದ್ದು ಸತ್ಯವೆಂದು ಹೇಳಿದರೆ ಮಾತ್ರ ಅವರನ್ನು ಸಾಯಿಸಬೇಕು.


ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.


ಆದರೆ ನಾನು, ‘ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು’ ಎಂದು ಹೇಳಿದೆನು.


ಇಬ್ಬರ ಸಾಕ್ಷಿ ಒಂದೇ ಆಗಿದ್ದರೆ ಅವರ ಹೇಳಿಕೆಯನ್ನು ಸ್ವೀಕರಿಸಿಕೊಳ್ಳಬೇಕೆಂದು ನಿಮ್ಮ ಧರ್ಮಶಾಸ್ತ್ರವೇ ತಿಳಿಸುತ್ತದೆ.


ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.


ಆದ್ದರಿಂದ ಪಿಲಾತನು ಆ ಯೆಹೂದ್ಯರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ನೀವು ಹೊರಿಸುತ್ತಿರುವ ಅಪರಾಧಗಳೇನು?” ಎಂದು ಕೇಳಿದನು.


ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.


ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು