Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:23 - ಪರಿಶುದ್ದ ಬೈಬಲ್‌

23 ತಿಮೊಥೆಯನೇ, ನೀನು ನೀರನ್ನು ಮಾತ್ರ ಕುಡಿಯದೆ ಸ್ವಲ್ಪ ದ್ರಾಕ್ಷಾರಸವನ್ನು ಸಹ ಕುಡಿಯಬೇಕು. ಇದರಿಂದ ನಿನ್ನ ಜೀರ್ಣಶಕ್ತಿಯು ಹೆಚ್ಚುವುದರಿಂದ ಪದೇಪದೇ ಅಸ್ವಸ್ಥನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗಾಗ್ಗೆ ನೀನು ಅಸ್ವಸ್ಥನಾಗುವುದುಂಟು. ಆದ್ದರಿಂದ ಬರೀ ನೀರನ್ನು ಕುಡಿದರೆ ಸಾಲದು. ನಿನ್ನ ಜೀರ್ಣಶಕ್ತಿಯ ಸುಧಾರಣೆಗಾಗಿ ಸ್ವಲ್ಪ ದ್ರಾಕ್ಷಾರಸವನ್ನೂ ಸೇವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖಾಲಿ ಪಾನಿ ಎವ್ಡೆಚ್ ಫಿವ್‍ನಕೊ. ತುಜ್ಯಾ ಜಿರ್‍ವನಿಕ್ ಅನಿ ತನ್ನಾ-ತನ್ನಾ ಸಿಕ್ ಪಡ್ತಲ್ಯಾಕ್ ಉಲ್ಲೊ ಆದಾರ್ ಹೊವ್‍ಸಾಟ್ನಿ ಉಲ್ಲಿಸಿ ವಾಯ್ನ್ ಬಿ ಫಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:23
11 ತಿಳಿವುಗಳ ಹೋಲಿಕೆ  

ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.


ಆತನು ನಿರ್ಮಿಸಿದ ಪ್ರತಿಯೊಂದೂ ಉತ್ತಮವಾಗಿರುತ್ತದೆ. ಆತನಿಗೆ ಕೃತಜ್ಞತಾಸ್ತುತಿ ಮಾಡಿ ತೆಗೆದುಕೊಳ್ಳುವ ಯಾವುದನ್ನೇ ಆಗಲಿ ನಿಷಿದ್ಧವೆಂದು ತಿರಸ್ಕರಿಸಬಾರದು.


ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;


ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು.


ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.


ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.


ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


ಯಾಜಕರು ಒಳಗಿನ ಪ್ರಾಕಾರವನ್ನು ಪ್ರವೇಶಿಸುವಾಗ ದ್ರಾಕ್ಷಾರಸವನ್ನು ಕುಡಿದಿರಬಾರದು.


ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು