Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:8 - ಪರಿಶುದ್ದ ಬೈಬಲ್‌

8 ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕಡೆಯಾದವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಜರ್ ಕೊನ್ ಅಪ್ನಾಚ್ಯಾ ಸೊಯ್ರ್ಯಾಂಚಿ ಕಾಳಜಿ ಘೆಯ್ನ್ಯಾಸಿ ಅನಿ ಲೈ ಕರುನ್ ಅಪ್ನಾಚ್ಯಾ ಘರಾತ್ಲ್ಯಾ ಲೊಕಾಂಚಿ ತರ್ ತೆನಿ ವಿಶ್ವಾಸ್ ಸೊಡ್ಲ್ಯಾನಾತ್ ಅನಿ ದೆವಾಕ್ ವಿಶ್ವಾಸ್ ಕರಿನಸಲ್ಲ್ಯಾಂಚ್ಯಾನ್ಕಿ ಬುರ್ಶಿ ತೆಂಚಿ ಪರಿಸ್ತಿತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:8
19 ತಿಳಿವುಗಳ ಹೋಲಿಕೆ  

ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು.


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.


ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.


ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.


ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.


“ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಮುಂದೆ ತೆರೆದ ಬಾಗಿಲನ್ನು ಇಟ್ಟಿದ್ದೇನೆ. ಅದನ್ನು ಯಾರೂ ಮುಚ್ಚಲಾರರು. ನೀನು ದುರ್ಬಲನೆಂಬುದು ನನಗೆ ತಿಳಿದಿದೆ. ಆದರೆ ನೀನು ನನ್ನ ಬೋಧನೆಯನ್ನು ಅನುಸರಿಸಿದೆ. ನನ್ನ ಹೆಸರನ್ನು ಹೇಳಲು ನೀನು ಹಿಂಜರಿಯಲಿಲ್ಲ.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.


ನಾನು ಬಂದು ಈ ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ಕ್ರಿಸ್ತನೂ ಸೈತಾನನೂ ಅನ್ಯೋನ್ಯವಾಗಿರಲು ಸಾಧ್ಯವೇ? ವಿಶ್ವಾಸಿಗಳಿಗೂ ಅವಿಶ್ವಾಸಿಗಳಿಗೂ ಪಾಲುಗಾರಿಕೆಯೇನು?


ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.


ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ!


ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು