Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:11 - ಪರಿಶುದ್ದ ಬೈಬಲ್‌

11 ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ತಿಯಾ, ದೆವಾಚೊ ಪೊರ್ ಹೊವ್ನ್ ಹಾಸ್, ತಸೆ ಹೊವ್ನ್ ಹ್ಯಾ ಸಗ್ಳ್ಯಾ ಸಂಗ್ತಿಯಾನಿಕ್ನಾ ಧುರ್ ರ್‍ಹಾ ಅನಿ ಬರೆಪಾನಾಚೊ, ದೆವಸ್ಪಾನಾಚಿ ಸೆವಾ ಕರ್‍ತಲೊ, ವಿಶ್ವಾಸಾಚೊ, ಪ್ರೆಮಾಚೊ, ಥಂಡ್‍ಪಾನಾಚೊ, ಅನಿ ಬೊಳೆಪಾನಾಚೊ ಹೊವ್ನ್ ರ್‍ಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:11
40 ತಿಳಿವುಗಳ ಹೋಲಿಕೆ  

ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ಆದ್ದರಿಂದ ದೇವರ ಸೇವಕರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ.


ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.


ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ಪ್ರೀತಿಯೇ ನಿಮ್ಮ ಗುರಿಯಾಗಿರಲಿ. ಅಲ್ಲದೆ ಪವಿತ್ರಾತ್ಮನ ವರಗಳನ್ನು ಹೊಂದಿಕೊಳ್ಳಲು ವಿಶೇಷವಾಗಿ ಪ್ರವಾದಿಸುವ ವರವನ್ನು ಬಹಳವಾಗಿ ಅಪೇಕ್ಷಿಸಬೇಕು.


ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.


“ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.


ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು. ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ.


ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,


ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.


ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.


ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.


ಯೋಷೀಯನು, “ನಾನು ನೋಡುತ್ತಿರುವ ಆ ಸ್ಮಾರಕ ಯಾವುದು?” ಎಂದು ಕೇಳಿದನು. ಆ ನಗರದ ಜನರು ಅವನಿಗೆ, “ಅದು ಯೆಹೂದದಿಂದ ಬಂದ ದೇವಮನುಷ್ಯನ ಸಮಾಧಿ. ನೀನು ಬೇತೇಲಿನ ಯಜ್ಞವೇದಿಕೆಗೆ ಮಾಡಿದ ಕಾರ್ಯಗಳನ್ನು ಕುರಿತು ಈ ಪ್ರವಾದಿಯು ಬಹಳ ಕಾಲದ ಹಿಂದೆಯೇ ಹೇಳಿದ್ದನು” ಎಂದರು.


ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವ ಮನುಷ್ಯನೇ, ನನ್ನ ಮತ್ತು ಈ ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ!


ಅಹಜ್ಯನು ಎಲೀಯನ ಬಳಿಗೆ ಒಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಮಂದಿ ಜನರನ್ನು ಕಳುಹಿಸಿದನು. ಸೇನಾಧಿಪತಿಯು ಎಲೀಯನ ಬಳಿಗೆ ಹೋದನು. ಆ ಸಮಯದಲ್ಲಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆ ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ಕೆಳಗಿಳಿದು ಬಾ’” ಎಂದು ಹೇಳಿದನು.


ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


ದೇವಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು, “ಯೆಹೋವನು ಈ ಸಂಗತಿಗಳನ್ನು ತಿಳಿಸಿದನು: ‘ನಿನ್ನ ಪೂರ್ವಿಕರು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದರು. ಆಗ ನಾನು ನಿನ್ನ ಪೂರ್ವಿಕರಿಗೆ ದರ್ಶನ ನೀಡಿದೆ.


ಆ ಪ್ರವಾದಿಯು ಆ ಮನುಷ್ಯನನ್ನು ಮೋಸದಿಂದ ಕರೆದು ತಂದಿದ್ದನು. ಅವನಿಗೆ ಸಂಭವಿಸಿದ್ದನ್ನು ಕೇಳಿದಾಗ ಅವನು, “ಯೆಹೋವನ ಆಜ್ಞೆಗಳನ್ನು ಅನುಸರಿಸದಿದ್ದ ದೇವಮನುಷ್ಯನೇ ಅವನಾಗಿರಬೇಕು. ಅವನನ್ನು ಕೊಲ್ಲಲು ಯೆಹೋವನು ಸಿಂಹವನ್ನು ಕಳುಹಿಸಿದನು. ಹೀಗೆ ಮಾಡುವುದಾಗಿ ಯೆಹೋವನೇ ಹೇಳಿದ್ದನು” ಎಂದನು.


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.


ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.


ನೀವು ಒಳ್ಳೆಯವರೂ ನ್ಯಾಯವಂತರೂ ಆಗಿದ್ದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ವಾಸಿಸುವಿರಿ ಮತ್ತು ಅದನ್ನು ನಿಮ್ಮ ವಶದಲ್ಲಿಟ್ಟುಕೊಳ್ಳುವಿರಿ.


ಅಲ್ಲಿ ಆಸಾಫನ ಸಹೋದರರಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ ಮತ್ತು ಹನಾನೀ ಇದ್ದರು. ದೇವಮನುಷ್ಯನಾದ ದಾವೀದನು ತಯಾರಿಸಿದ್ದ ವಾದ್ಯಗಳು ಅವರ ಬಳಿಯಲ್ಲಿದ್ದವು. ಎಜ್ರನು ಗೋಡೆಯನ್ನು ಪ್ರತಿಷ್ಠೆ ಮಾಡಲು ಒಂದು ತಂಡದ ಜನರನ್ನು ತನ್ನೊಂದಿಗೆ ಕರೆದುಕೊಂಡು ಹೋದನು.


ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.


ಮೋಶೆಯು ದೇವರ ಮನುಷ್ಯನಾಗಿದ್ದನು. ಅವನ ಮಕ್ಕಳು ಲೇವಿಕುಲದಲ್ಲಿ ಸೇರಿಸಲ್ಪಟ್ಟಿದ್ದರು.


ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.


ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ.


ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು.


ಹೀಗಿರಲಾಗಿ ಒಬ್ಬನು ತನ್ನ ದುಷ್ಕೃತ್ಯಗಳನ್ನು ತೊರೆದು ತನ್ನನ್ನು ಶುದ್ಧೀಕರಿಸಿಕೊಂಡರೆ ಅವನನ್ನು ಬಳಸಲಾಗುವುದು. ಅವನು ದೇವರ ಸೇವೆಗೆ ಮೀಸಲಾಗುತ್ತಾನೆ; ಯಜಮಾನನಿಗೆ ಉಪಯುಕ್ತನಾಗುತ್ತಾನೆ; ಸತ್ಕಾರ್ಯಗಳನ್ನು ಕೈಕೊಳ್ಳಲು ಸಿದ್ಧನಾಗಿರುತ್ತಾನೆ.


ಆದರೆ ನನ್ನನ್ನು ಕುರಿತು ನಿನಗೆ ಎಲ್ಲವೂ ತಿಳಿದಿದೆ. ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ತಾಳ್ಮೆ, ಪ್ರೀತಿ, ಸೈರಣೆ ನಿನಗೆ ತಿಳಿದಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು