Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:15 - ಪರಿಶುದ್ದ ಬೈಬಲ್‌

15 ದೇವರು ತಕ್ಕ ಸಮಯದಲ್ಲಿ ಅದನ್ನು ನೆರವೇರಿಸುವನು. ಆತನು ಭಾಗ್ಯವಂತನಾದ ಏಕಾಧಿಪತಿಯೂ ರಾಜಾಧಿರಾಜನೂ ಪ್ರಭುಗಳಿಗೆ ಪ್ರಭುವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15-16 ಸೂಕ್ತಕಾಲದಲ್ಲಿ ಕ್ರಿಸ್ತಯೇಸುವನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವರು ಪರಮಾನಂದನು ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಭಾಗ್ಯವಂತನಾದ ಏಕಾಧಿಪತಿಯು ತನ್ನ ಕ್ಲುಪ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು ರಾಜಾಧಿರಾಜನೂ ಕರ್ತರ ಕರ್ತನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವ್ ತೆಚ್ಯಾ ಸಮಾ ಎಳಾರ್ ತೆಕಾ ಪ್ರಕಟ್ ಕರ್‍ತಾ, ತೊ ಮೊಟ್ಯಾ ಆಶಿರ್ವಾದಾನ್ ಭರಲ್ಲೊ ಎಕ್ಲೊಚ್ ಎಕ್ ಅಧಿಕಾರಿ, ರಾಜಾಂಚೊ ರಾಜಾ ಅನಿ ಧನಿಯಾಂಚೊ ಧನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:15
16 ತಿಳಿವುಗಳ ಹೋಲಿಕೆ  

ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.


ಈ ಉಪದೇಶವು ಜನರಿಗೆ ತಿಳಿಸುವುದಕ್ಕಾಗಿ ದೇವರು ನನಗೆ ಕೊಟ್ಟ ಸುವಾರ್ತೆಯ ಒಂದು ಭಾಗವಾಗಿದೆ. ಭಾಗ್ಯವಂತನಾದ ದೇವರಿಂದಲೇ ಈ ಮಹಿಮೆಯ ಸುವಾರ್ತೆಯು ಬಂದಿತು.


ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.


ನನ್ನ ಸಹಾಯದಿಂದ ರಾಜರುಗಳು ರಾಜ್ಯವಾಳುವರು; ಅಧಿಪತಿಗಳು ನ್ಯಾಯವಾದ ಕಾನೂನುಗಳನ್ನು ಮಾಡುವರು.


ಯೇಸುವು ಜನರೆಲ್ಲರ ಪಾಪಗಳಿಗೆ ತನ್ನನ್ನೇ ಉಚಿತವಾಗಿ ಒಪ್ಪಿಸಿಕೊಟ್ಟನು. ಜನರೆಲ್ಲರೂ ರಕ್ಷಣೆ ಹೊಂದಬೇಕೆಂಬ ದೇವರ ಅಪೇಕ್ಷೆಗೆ ಯೇಸುವು ತಕ್ಕಕಾಲದಲ್ಲಿ ಸಾಕ್ಷಿನೀಡಿದನು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಅರಸನಾದ ಅರ್ತಷಸ್ತನಿಂದ: ಪರಲೋಕದ ದೇವರ ಕಟ್ಟಳೆಗಳ ಬೋಧಕನೂ ಯಾಜಕನೂ ಆಗಿರುವ ಎಜ್ರನಿಗೆ ವಂದನೆಗಳು.


ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.


ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು