Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:4 - ಪರಿಶುದ್ದ ಬೈಬಲ್‌

4 ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಗರುಕಿನ್ ಫುಗ್ಲಾ ಅನಿ ತೆಕಾ ಕಾಯ್ಬಿ ಕಳಿನಾ. ತೊ ಪಾಯ್ದ್ಯಾಕ್ ಪಡಿನಸಲ್ಯಾ ಆಶ್ಯಾನಿ ಖರ್‍ಯಾ ಗೊಸ್ಟಿಯಾಂಚ್ಯಾ ವಿಶಯಾತ್ ವಾದಿಕ್‍ ವಾದ್ ಕರ್‍ತಾ ಅನಿ ಗೊಸ್ಟಿಯಾಂಚೊ ಝಗ್ಡೊ ಕರ್‍ತಾ. ಹೆಚ್ಯಾ ವೈನಾ ಖುದ್ಗೆಪಾನ್, ಎಕಾಮೆಕಾತ್ನಿ ಪಡುನ್‍ ಯೆಯ್‍ನಸಲ್ಲೆ, ನಿಂದಾ ಅನಿ ಬುರ್ಶಿ ಗಾಳಿಯಾ ದಿತಲೆ ಯೆತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:4
44 ತಿಳಿವುಗಳ ಹೋಲಿಕೆ  

ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ಆ ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ.


ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ;


ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.


ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.


ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು.


ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ.


ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.


ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.


ತಾವು ಧರ್ಮೋಪದೇಶಕರಾಗಬೇಕೆಂಬುದು ಅವರ ಅಪೇಕ್ಷೆ. ಆದರೆ ತಾವು ಏನು ಮಾತಾಡುತ್ತಿದ್ದೇವೆ ಎಂಬುದೇ ಅವರಿಗೆ ತಿಳಿದಿಲ್ಲ. ತಮಗೆ ಖಚಿತವಾಗಿ ತಿಳಿದಿದೆ ಎಂದು ತಾವು ಹೇಳುವ ಸಂಗತಿಗಳನ್ನೂ ಅವರು ಅರ್ಥಮಾಡಿಕೊಳ್ಳುವುದಿಲ್ಲ.


ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು.


ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


ಬುದ್ಧಿಯಿಲ್ಲದೆ ಕುತರ್ಕ ಮಾಡುವ ಜನರಿಂದ, ನಿರರ್ಥಕವಾದ ವಂಶಾವಳಿಗಳ ಚರಿತ್ರೆಯ ಬಗ್ಗೆ ಮಾತನಾಡುವ ಜನರಿಂದ, ಮೋಶೆಯು ಬರೆದಿರುವ ಧರ್ಮಶಾಸ್ತ್ರದಲ್ಲಿರುವ ನಿಯಮಗಳ ಬಗ್ಗೆ ತೊಂದರೆಯನ್ನು ಉಂಟುಮಾಡುವ ಮತ್ತು ವಾಗ್ವಾದ ಮಾಡುವ ಜನರಿಂದ ದೂರವಾಗಿರು. ಅವುಗಳಿಗೆ ಯಾವ ಬೆಲೆಯೂ ಇಲ್ಲ, ಅವುಗಳಿಂದ ಜನರಿಗೆ ಯಾವ ಪ್ರಯೋಜನವೂ ಇಲ್ಲ.


ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.


ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.


ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ನೀವು ಮಾಡುವ ಪ್ರತಿಯೊಂದನ್ನು ಗುಣಗುಟ್ಟದೆಯೂ ವಿವಾದವಿಲ್ಲದೆಯೂ ಮಾಡಿರಿ.


ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ಕೆಲವರು ತಮ್ಮಲ್ಲಿರುವ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಇನ್ನು ಕೆಲವರು ಸಹಾಯ ಮಾಡಬೇಕೆಂಬ ಉದ್ದೇಶದಿಂದಲೂ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ.


ಯಾವನಾದರೂ ತಾನು ಪ್ರಾಮುಖ್ಯನಲ್ಲದಿದ್ದರೂ ತನ್ನನ್ನು ಪ್ರಾಮುಖ್ಯನೆಂದು ಭಾವಿಸಿಕೊಂಡರೆ ಅವನು ತನ್ನನ್ನೇ ಮೋಸಪಡಿಸಿಕೊಳ್ಳುತ್ತಾನೆ. ಒಬ್ಬನು ತನ್ನನ್ನು ಮತ್ತೊಬ್ಬನೊಡನೆ ಹೋಲಿಸಿಕೊಳ್ಳಕೂಡದು.


ನಾವು ಅಹಂಕಾರಿಗಳಾಗಬಾರದು, ಒಬ್ಬರನ್ನೊಬ್ಬರು ಕೆಣಕುವವರಾಗಬಾರದು, ಒಬ್ಬರಮೇಲೊಬ್ಬರು ಮತ್ಸರ ಉಳ್ಳವರಾಗಬಾರದು.


ನೀವು ಒಬ್ಬರನ್ನೊಬ್ಬರು ಕಚ್ಚಿ ಹರಿದುಹಾಕಿ ನುಂಗುವುದಾದರೆ ಒಬ್ಬರಿಂದೊಬ್ಬರು ನಾಶವಾಗುತ್ತೀರಿ. ಆದ್ದರಿಂದ ಎಚ್ಚರಿಕೆಯಿಂದಿರಿ!


ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.


ಮೊದಲನೆಯದಾಗಿ, ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಪಂಗಡಗಳಿರುವುದಾಗಿ ಕೇಳಿದ್ದೇನೆ. ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.


ಕೆಲವು ಜನರು ಇದರ ಬಗ್ಗೆ ಇನ್ನೂ ವಾದಮಾಡಬಯಸಬಹುದು. ಆದರೆ ಈ ಸಂಪ್ರದಾಯವು ನಮ್ಮಲ್ಲಾಗಲಿ ದೇವರ ಸಭೆಗಳಲ್ಲಾಗಲಿ ಇಲ್ಲ.


ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.


ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.


ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.


ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.


ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.


ನಿಮ್ಮ ಅಪವಾದಗಳು ಕೇವಲ ಪದಗಳಿಗೂ ಹೆಸರುಗಳಿಗೂ ಮತ್ತು ನಿಮ್ಮ ಸ್ವಂತ ಧರ್ಮಶಾಸ್ತ್ರಕ್ಕೂ ಸಂಬಂಧಪಟ್ಟಿವೆ. ಆದ್ದರಿಂದ ನೀವೇ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಈ ಸಂಗತಿಗಳಿಗೆ ನ್ಯಾಯಾಧೀಶನಾಗಿರಲು ನನಗೆ ಇಷ್ಟವಿಲ್ಲ!” ಎಂದು ಹೇಳಿ,


ಆದರೆ ಆ ಪಟ್ಟಣದಲ್ಲಿ ಸಿಮೋನ ಎಂಬ ಒಬ್ಬನಿದ್ದನು. ಫಿಲಿಪ್ಪನು ಅಲ್ಲಿಗೆ ಬರುವುದಕ್ಕಿಂತ ಮೊದಲಿನಿಂದಲೂ ಸಿಮೋನನು ಮಂತ್ರತಂತ್ರಗಳನ್ನು ಮಾಡುತ್ತಿದ್ದನು. ಅವನು ತನ್ನ ತಂತ್ರಗಳಿಂದ ಸಮಾರ್ಯದ ಜನರೆಲ್ಲರನ್ನು ವಿಸ್ಮಯಗೊಳಿಸಿದ್ದನು. ಸಿಮೋನನು ತನ್ನನ್ನು ಮಹಾವ್ಯಕ್ತಿಯೆಂದು ಹೇಳಿಕೊಂಡು ಜಂಭಪಡುತ್ತಿದ್ದನು.


ನೀವು ಆಹಾರಕ್ಕಾಗಿ ಹಸಿವೆಯಿಂದಿಲ್ಲ. ನೀವು ಜಗಳ, ವಾಗ್ವಾದಕ್ಕಾಗಿ ಹಸಿದಿದ್ದೀರಿ. ನಿಮ್ಮ ಕ್ರೂರ ಕೈಗಳಿಂದ ಜನರನ್ನು ಹೊಡೆಯಲು ಹಸಿವೆಯಿಂದಿದ್ದೀರಿ. ನೀವು ಉಪವಾಸ ಮಾಡುವಾಗ ನನಗಾಗಿ ಮಾಡುವದಿಲ್ಲ. ನನ್ನನ್ನು ಸ್ತುತಿಸಲು ನೀವು ನಿಮ್ಮ ಸ್ವರವನ್ನು ಉಪಯೋಗಿಸುವದಿಲ್ಲ.


ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು.


ದಾನ ಮಾಡುವುದಾಗಿ ಹೇಳಿಯೂ ಮಾಡದವರು ಮಳೆಯನ್ನು ತಾರದ ಮೋಡಗಳಂತೆಯೂ ಗಾಳಿಯಂತೆಯೂ ಇರುವರು.


ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು