Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:8 - ಪರಿಶುದ್ದ ಬೈಬಲ್‌

8 ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಧನಿಯಾಚ್ಯಾ ವಿಶಯಾತ್ಲಿ ಬರಿ ಖಬರ್ ತುಮ್ಚ್ಯಾ ವೈನಾ ಸಗ್ಳ್ಯಾ ಮೆಸಿದೊನಿಯಾತ್ ಅನಿ ಅಖಾಯಿಯಾತ್ ಪರ್ಗಟ್ ಹೊಲ್ಲೆ ತವ್ಡೆಚ್ ನ್ಹಯ್, ದೆವಾ ವರ್‍ತಿ ತುಮಿ ಥವಲ್ಲ್ಯಾ ವಿಶ್ವಾಸಾಚಿ ಖಬರ್ ಸೈತ್ ಸಗ್ಳ್ಯಾಕ್ಡೆ ಜಾವ್ನ್ ಪಾವ್ಲಾ, ಹೆಚ್ಯಾ ವಿಶಯಾತ್ ಅಮಿ ಅನಿ ಕಾಯ್ ಜಾಸ್ತಿಚೆ ಸಾಂಗುಚೆ ಮನುನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:8
20 ತಿಳಿವುಗಳ ಹೋಲಿಕೆ  

ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.


ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು.


ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.


ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಯೆಹೋವನು ಇಸ್ರೇಲರಿಗೆ ಮಾಡಿದ ಒಳ್ಳೆಯ ಸಂಗತಿಗಳಿಗಾಗಿಯೂ ಈಜಿಪ್ಟಿನವರಿಂದ ಇಸ್ರೇಲರನ್ನು ಯೆಹೋವನು ಬಿಡುಗಡೆಗೊಳಿಸಿದ್ದಕ್ಕಾಗಿಯೂ ಇತ್ರೋನನು ಬಹಳ ಸಂತೋಷಪಟ್ಟನು.


ನಾವು ಈ ಸಂಗತಿಗಳನ್ನು ಹೇಳಬಲ್ಲೆವು; ಏಕೆಂದರೆ ನಾವು ಕ್ರಿಸ್ತನ ಮೂಲಕ ದೇವರ ಸನ್ನಿಧಿಯಲ್ಲಿ ಭರವಸದಿಂದಿದ್ದೇವೆ.


ದೇವರ ಉಪದೇಶವು ನಿಮ್ಮಿಂದ ಬರುತ್ತದೆಯೇ? ಇಲ್ಲ! ಆ ಉಪದೇಶವನ್ನು ಹೊಂದಿಕೊಂಡವರು ನೀವು ಮಾತ್ರವೋ? ಇಲ್ಲ!


ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.


ಅಖಾಯ ನಾಡಿಗೆ ಗಲ್ಲಿಯೋನನು ರಾಜ್ಯಪಾಲನಾದಾಗ ಕೆಲವು ಯೆಹೂದ್ಯರು ಪೌಲನಿಗೆ ವಿರೋಧವಾಗಿ ಸೇರಿಬಂದರು. ಅವರು ಪೌಲನನ್ನು ನ್ಯಾಯಾಲಯಕ್ಕೆ ಕರದೊಯ್ದು,


ಅಲ್ಲಿನ ದೇವಜನರಲ್ಲಿ ಕೆಲವರು ಬಡವರಾಗಿದ್ದಾರೆ. ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಅಲ್ಲಿನ ಬಡಜನರಿಗಾಗಿ ಸಂತೋಷದಿಂದ ಧನಸಹಾಯ ಮಾಡಿದ್ದಾರೆ.


ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.


ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು