Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:9 - ಪರಿಶುದ್ದ ಬೈಬಲ್‌

9 ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಿ ಸಗ್ಳಿ ಲೊಕಾ, ಅಮಿ ತುಮ್ಚೆಕ್ಡೆ ಯೆಲ್ಲ್ಯಾ ತನ್ನಾ ತುಮಿ ಕಶೆ ಅಮ್ಕಾ ಸ್ವಿಕಾರ್ ಕರ್ಲ್ಯಾಸಿ, ಅನಿ ಮುರ್ತಿಚ್ಯಾ ಪುಜ್ಯಾತ್ನಾ ಖರ್‍ಯಾ ಝಿತ್ತ್ಯಾ ದೆವಾಚಿ ಸೆವಾ ಕರುಕ್ ದೆವಾಕ್ಡೆ ಕಶೆ ಪರತ್ಲ್ಯಾಶಿ ಮನುನ್ ಅಪ್ನಿಚ್ ಸಾಂಗುಕ್ ಲಾಗಲ್ಲಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:9
30 ತಿಳಿವುಗಳ ಹೋಲಿಕೆ  

ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.


ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ಸಹೋದರ ಸಹೋದರಿಯರೇ, ನಾವು ನಿಮ್ಮಲ್ಲಿಗೆ ಬಂದದ್ದು ವ್ಯರ್ಥವಾಗಲಿಲ್ಲ ಎಂಬುದು ನಿಮಗೆ ತಿಳಿದಿದೆ.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ. ನಾನು ಯಾವಾಗ ಆತನನ್ನು ಸಂಧಿಸುವೆನು?


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!


ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.


ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


ಜೀವಸ್ವರೂಪನಾದ ದೇವರ ನುಡಿಯನ್ನು ಪ್ರತ್ಯಕ್ಷವಾಗಿ ನಾವು ಕೇಳಿದ ಹಾಗೆ ಬೇರೆ ಯಾರೂ ಕೇಳಿಲ್ಲ. ಆದರೂ ನಾವು ಜೀವದಿಂದಿದ್ದೇವೆ.


ಲೋಕದ ರಾಜರುಗಳು ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಲೋಕದ ಜನರು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ಹೇಳಿದನು.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


ಮತ್ತು “ಯಾವ ಸ್ಥಳದಲ್ಲಿ ದೇವರು, ‘ನೀವು ನನ್ನ ಜನರಲ್ಲ’ ಎಂದು ಹೇಳಿದ್ದನೋ ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.”


ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.


ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.


ಆದ್ದರಿಂದ ಪ್ರಿಯ ಮಕ್ಕಳೇ, ನೀವು ಸುಳ್ಳುದೇವರುಗಳಿಂದ ದೂರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು