Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:14 - ಪರಿಶುದ್ದ ಬೈಬಲ್‌

14 ಸಹೋದರ ಸಹೋದರಿಯರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳಂತಿದ್ದೀರಿ. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಇತರ ಯೆಹೂದ್ಯರಿಂದ ಹಿಂಸಿಸಲ್ಪಟ್ಟರು. ಅದೇ ರೀತಿಯಲ್ಲಿ ನೀವೂ ನಿಮ್ಮ ದೇಶದ ಇತರ ಜನರಿಂದ ಹಿಂಸಿಸಲ್ಪಟ್ಟವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಕಶೆ ಜುದೆಯಾತ್ಲ್ಯಾ ಕ್ರಿಸ್ತಾ ಜೆಜು ವರ್ತಿ ವಿಶ್ವಾಸ್ ಕರಲ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಜುದೆವಾನಿ ತರಾಸ್ ದಿಲ್ಯಾನಿ ಅನಿ ತೆನಿ ಕಸ್ಟ್ ಸೊಸ್ಲ್ಯಾನಿ, ತಸೆ ತುಮಿಬಿ ತುಮ್ಚ್ಯಾಚ್ ಲೊಕಾನಿಕ್ನಾ ತರಾಸ್ ಸೊಸ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:14
26 ತಿಳಿವುಗಳ ಹೋಲಿಕೆ  

ನಾವು ನಿಮ್ಮೊಡನಿದ್ದಾಗ, ನಾವೆಲ್ಲರೂ ಹಿಂಸೆಯನ್ನು ಅನುಭವಿಸಬೇಕಾಗುತ್ತದೆಯೆಂದು ನಿಮಗೆ ತಿಳಿಸಿದೆವು. ನಾವು ಹೇಳಿದಂತೆಯೇ ಅದು ಸಂಭವಿಸಿತು ಎಂಬುದು ನಿಮಗೆ ತಿಳಿದಿದೆ.


ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.


ಕ್ರಿಸ್ತನಲ್ಲಿರುವ ಜುದೇಯದ ಸಭೆಗಳವರು ನನ್ನನ್ನು ಹಿಂದೆಂದೂ ಭೇಟಿಯಾಗಿರಲಿಲ್ಲ.


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ.


ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.


ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.


ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.


ಪ್ರಭುವಿನ ಶಿಷ್ಯರನ್ನು ಹೆದರಿಸಲು ಮತ್ತು ಕೊಲ್ಲಲು ಸೌಲನು ಜೆರುಸಲೇಮಿನಲ್ಲಿ ಇನ್ನೂ ಪ್ರಯತ್ನಿಸುತ್ತಿದ್ದನು. ಆದ್ದರಿಂದ ಅವನು ಪ್ರಧಾನಯಾಜಕನ ಬಳಿಗೆ ಹೋಗಿ,


ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು.


ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು.


ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಅಖಾಯ ನಾಡಿಗೆ ಗಲ್ಲಿಯೋನನು ರಾಜ್ಯಪಾಲನಾದಾಗ ಕೆಲವು ಯೆಹೂದ್ಯರು ಪೌಲನಿಗೆ ವಿರೋಧವಾಗಿ ಸೇರಿಬಂದರು. ಅವರು ಪೌಲನನ್ನು ನ್ಯಾಯಾಲಯಕ್ಕೆ ಕರದೊಯ್ದು,


ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು