Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:10 - ಪರಿಶುದ್ದ ಬೈಬಲ್‌

10 ಹಗಲಿರುಳು ನಿಮ್ಮ ವಿಷಯದಲ್ಲಿ ಬಹಳವಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ನಂಬಿಕೆಯಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವದಕ್ಕೂ ನಮಗೆ ಅನುಕೂಲವಾಗಬೇಕೆಂದು ನಾವು ಹಗಲಿರುಳು ದೇವರನ್ನು ಅತ್ಯಂತವಾಗಿ ಬೇಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಮುಖವನ್ನು ನೋಡುವುದಕ್ಕಾಗಿಯೂ ನಿಮ್ಮ ನಂಬಿಕೆಯಲ್ಲಿರುವ ಕೊರತೆಯನ್ನು ನಿವಾರಿಸುವುದಕ್ಕೂ ನಾವು ಹಗಲಿರುಳು ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ಪರ್‍ತುನ್ ತುಮ್ಚೆ ತೊಂಡ್ ಬಗುಕ್ ಅನಿ ತುಮ್ಚ್ಯಾ ವಿಶ್ವಾಸಾಕ್ ಅನಿ ಕಾಯ್ಬಿ ಭರ್‍ತಿ ಕರ್‍ತಲೆ ರ್‍ಹಾಲ್ಯಾರ್ ತುಮ್ಕಾ ಆದಾರ್ ದಿ ಸಾರ್ಕೆ ಹೊವ್ಕ್ ದೆವ್ ಅಮ್ಕಾ ಅವ್ಕಾಸ್ ಕರುನ್ ದಿಂವ್ದಿತ್ ಮನುನ್ ಅಮಿ ತೆಚೆ ಕಡೆ ದಿಸ್‍-ರಾತ್ ಅನಿ ಉಲ್ಲೆ ಉಮ್ಮೆದಿನ್ ಮಾಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:10
19 ತಿಳಿವುಗಳ ಹೋಲಿಕೆ  

ನೀವು ಶಕ್ತರಾಗಿರುವುದಾದರೆ, ನಾವು ಬಲಹೀನರಾಗಿರಲು ಸಂತೋಷಿಸುತ್ತೇವೆ. ನೀವು ನಂಬಿಕೆಯಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಉದ್ದೇಶ.


ನಾವು ನಿಮ್ಮ ಬಳಿಗೆ ಬರಲು ಮಾರ್ಗವನ್ನು ಸರಾಗಗೊಳಿಸುವಂತೆ ನಮ್ಮ ತಂದೆಯಾದ ದೇವರಿಗೂ ಪ್ರಭುವಾದ ಯೇಸುವಿಗೂ ಪ್ರಾರ್ಥಿಸುತ್ತೇವೆ.


ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.


ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.


ಆದ್ದರಿಂದ ನಾನು ಜೀವದಿಂದುಳಿದು ನಿಮ್ಮೊಂದಿಗೆ ಇರುತ್ತೇನೆಂದು ನನಗೆ ಗೊತ್ತಿದೆ. ನೀವು ನಂಬಿಕೆಯಲ್ಲಿ ವೃದ್ಧಿಯಾಗಿರಲು ಆನಂದವಾಗಿರಲು ನಿಮಗೆ ನೆರವಾಗಬೇಕೆಂತಲೂ


ನಾನು ಈ ಎಲ್ಲಾ ವಿಷಯಗಳಲ್ಲಿ ಬಹು ಭರವಸೆ ಉಳ್ಳವನಾಗಿದ್ದೆನು. ಆದ್ದರಿಂದ ನಿಮ್ಮನ್ನು ಮೊದಲು ಸಂದರ್ಶಿಸಲು ನಾನು ಯೋಜನೆಗಳನ್ನು ಮಾಡಿದೆನು. ಆಗ ನಿಮಗೆ ಎರಡು ಸಲ ಆಶೀರ್ವಾದವಾಗಬಹುದಿತ್ತು.


ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!


ನಾನು ಇಳಿದುಕೊಳ್ಳಲು ಒಂದು ಕೊಠಡಿಯನ್ನು ದಯವಿಟ್ಟು ಸಿದ್ಧಗೊಳಿಸು. ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರಲು ಅವಕಾಶ ನೀಡುವನೆಂಬ ಭರವಸೆ ನನಗಿದೆ.


ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.


ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.


ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”


ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು