Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:13 - ಪರಿಶುದ್ದ ಬೈಬಲ್‌

13 ಸಹೋದರ ಸಹೋದರಿಯರೇ, ಸತ್ತುಹೋದ ಜನರ ಬಗ್ಗೆ ನೀವು ತಿಳಿದುಕೊಳ್ಳಬೇಕೆಂಬುದು ನಮ್ಮ ಅಪೇಕ್ಷೆ. ನಿರೀಕ್ಷೆಯಿಲ್ಲದ ಜನರಂತೆ ನೀವು ದುಃಖದಿಂದಿರುವುದು ನಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು ನಿರೀಕ್ಷೆಯಿಲ್ಲದವರಾದ ಇತರರಂತೆ ದುಃಖಿಸುವದು ನಮ್ಮ ಮನಸ್ಸಿಗೆ ಒಪ್ಪುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಜೆ ಕೊನ್ ಮರ್ಲ್ಯಾತ್ ತೆಂಚ್ಯಾ ವಿಶಯಾತ್ಲೆ ಎಕ್ ಖರೆ ಅಮಿ ತುಮ್ಕಾ ಕಳ್ವುತಾಂವ್, ಕಶ್ಯಾಕ್ ಮಟ್ಲ್ಯಾರ್, ಬರೊಸೊ ನಸಲ್ಲ್ಯಾಂಚ್ಯಾ ಸಾರ್ಕೆ ಹೆಚ್ಯಾ ವಿಶಯಾತ್ ತುಮ್ಕಾ ಬೆಜಾರ್ ಹೊತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:13
35 ತಿಳಿವುಗಳ ಹೋಲಿಕೆ  

ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ನಾವು ತನ್ನೊಂದಿಗೆ ಜೀವಿಸಲೆಂದು ಯೇಸು ನಮಗಾಗಿ ಸತ್ತನು. ಯೇಸು ಪ್ರತ್ಯಕ್ಷನಾದಾಗ, ನಾವು ಜೀವಿಸುತ್ತಿರುತ್ತೇವೋ ಇಲ್ಲವೆ ಸತ್ತಿರುತ್ತೇವೋ ಎಂಬುದು ಮುಖ್ಯವಲ್ಲ.


ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವಂತ ಸಂದೇಶವನ್ನೇ. ಪ್ರಭುವು ಮತ್ತೆ ಬಂದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿಂದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿಂತಲೂ ನಾವು ಮುಂದಿನವರಾಗುವುದಿಲ್ಲ.


ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ಆ ಜನರು, “ಆತನು ಮತ್ತೆ ಬರುವುದಾಗಿ ವಾಗ್ದಾನ ಮಾಡಿದ್ದನು. ಆತನು ಎಲ್ಲಿದ್ದಾನೆ? ನಮ್ಮ ಪಿತೃಗಳು ಸತ್ತುಹೋದರು. ಆದರೆ ಈ ಲೋಕವು ಆದಿಯಿಂದಲೂ ಇದ್ದ ರೀತಿಯಲ್ಲಿಯೇ ಇದೆ” ಎಂದು ಹೇಳುವರು.


ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು.


ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.


ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಆ ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು.


ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;


ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.


“ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!


ಮಾರ್ಥಳು, “ಅಂತಿಮ ದಿನದಂದು ಪುನರುತ್ಥಾನವಾಗುವಾಗ ಅವನು ಮತ್ತೆ ಎದ್ದುಬರುವನೆಂದು ನನಗೆ ಗೊತ್ತಿದೆ” ಎಂಬುದಾಗಿ ಉತ್ತರ ಕೊಟ್ಟಳು.


ಆದರೆ ಪ್ರಿಯ ಸ್ನೇಹಿತರೇ, ಇದೊಂದನ್ನು ಮಾತ್ರ ಮರೆಯದಿರಿ. ಪ್ರಭುವಿಗೆ ಒಂದು ದಿನವು ಸಾವಿರ ವರ್ಷಗಳಂತಿದೆ ಮತ್ತು ಸಾವಿರ ವರ್ಷಗಳು ಒಂದು ದಿನದಂತಿದೆ.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಸೊಲೊಮೋನನನ್ನು ಮತ್ತು ನನ್ನನ್ನು ಅಪರಾಧಿಗಳೆಂದು ಜನರೆಲ್ಲರೂ ಹೇಳುವರು” ಎಂದು ಹೇಳಿದಳು.


ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!


ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು.


ಸಹೋದರ ಸಹೋದರಿಯರೇ, ಆತ್ಮಿಕ ವರಗಳ ಬಗ್ಗೆ ನೀವು ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.


ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.


ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.


ಯೇಸು ಸತ್ತುಹೋದನೆಂದು ನಾವು ನಂಬುತ್ತೇವೆ. ಆದರೆ ಯೇಸು ಮತ್ತೆ ಜೀವಂತವಾಗಿ ಎದ್ದುಬಂದನೆಂಬುದನ್ನೂ ನಾವು ನಂಬುತ್ತೇವೆ. ಹಾಗೆಯೇ ಯೇಸುವಿನಲ್ಲಿ ವಿಶ್ವಾಸವಿಟ್ಟು ಸತ್ತುಹೋದವರನ್ನು ದೇವರು ಆತನ ಜೊತೆಯಲ್ಲಿ ಕರೆದುಕೊಂಡು ಬರುವನು.


ಆದುದರಿಂದ ನಾವು ಇತರ ಜನರಂತಿರಬಾರದು. ನಾವು ನಿದ್ರೆ ಮಾಡುವುದೇ ಬೇಡ. ನಾವು ಎಚ್ಚರದಿಂದ ಇದ್ದು, ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.


ಆದರೆ ಸತ್ತವನು ಅವನ ಹತ್ತಿರದ ಸಂಬಂಧಿಕರಲ್ಲಿ ಒಬ್ಬನಾಗಿದ್ದರೆ, ಆಗ ಅವನು ಆ ಹೆಣವನ್ನು ಮುಟ್ಟಬಹುದು. ಸತ್ತ ವ್ಯಕ್ತಿ ಅವನ ತಾಯಿ, ತಂದೆ, ಮಗ, ಮಗಳು, ಸಹೋದರ ಅಥವಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು