Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:15 - ಪರಿಶುದ್ದ ಬೈಬಲ್‌

15 ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವಂತ ಸಂದೇಶವನ್ನೇ. ಪ್ರಭುವು ಮತ್ತೆ ಬಂದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿಂದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿಂತಲೂ ನಾವು ಮುಂದಿನವರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ ಕರ್ತನು ಪ್ರತ್ಯಕ್ಷನಾಗುವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕಾಯ್ ಅಮಿ ತುಮ್ಕಾ ಶಿಕ್ವುಲಾಂವ್ ತೆ ಧನಿಯಾಚೆಚ್ ಶಿಕಾಪ್, ಧನಿ ಯೆತಲ್ಯಾ ದಿಸಿ ಝಿತ್ತೆ ಹೊತ್ತೆ ಅಮಿ, ಅತ್ತಾ ಮರುನ್ ಗೆಲ್ಲ್ಯಾ ಲೊಕಾಂಚ್ಯಾ ಫಿಡೆ ಜಾಯ್ನಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:15
19 ತಿಳಿವುಗಳ ಹೋಲಿಕೆ  

ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.


ಯೆಹೋವನೇ, ನಿನ್ನ ಸಹಾಯಕ್ಕಾಗಿ ಮೊರೆಯಿಡುತ್ತಿದ್ದೇನೆ. ಪ್ರತಿ ಮುಂಜಾನೆಯೂ ನಿನಗೆ ಪ್ರಾರ್ಥಿಸುತ್ತಿದ್ದೇನೆ.


ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.


ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ.


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ನಾನು ಯಾರಿಗೂ ಯಾವ ಸಾಲವನ್ನೂ ತೀರಿಸಬೇಕಿಲ್ಲ. ಆಕಾಶಮಂಡಲದ ಕೆಳಗಿರುವ ಸಮಸ್ತವೂ ನನ್ನದೇ.


ಆದರೆ ಮೀಕಾಯೆಹುವು, “ಇಲ್ಲ! ಯೆಹೋವನಾಣೆ, ಆತನು ತಿಳಿಸುವುದನ್ನೇ ನಾನು ಹೇಳುತ್ತೇನೆ” ಎಂದು ಉತ್ತರಿಸಿದನು.


ಈ ಸ್ಥಳದಲ್ಲಿ ನೀನು ಅನ್ನಪಾನಗಳನ್ನು ತೆಗೆದುಕೊಳ್ಳಕೂಡದೆಂದು ಯೆಹೋವನು ನಿನಗೆ ಆಜ್ಞಾಪಿಸಿದ್ದನು. ಆದರೆ ನೀನು ಹಿಂದಿರುಗಿಬಂದು ಅನ್ನಪಾನಗಳನ್ನು ತೆಗೆದುಕೊಂಡೆ. ಆದ್ದರಿಂದ ನಿನ್ನ ವಂಶದ ಸ್ಮಶಾನದಲ್ಲಿ ನಿನ್ನ ದೇಹವನ್ನು ಸಮಾಧಿಮಾಡಲಾಗುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ” ಎಂದನು.


ನಾನು ಏನನ್ನೂ ತಿನ್ನಬಾರದು ಮತ್ತು ಕುಡಿಯಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ. ನಾನು ಇಲ್ಲಿಗೆ ಬಂದ ರಸ್ತೆಯಲ್ಲಿ ಮತ್ತೆ ಹಿಂದಿರುಗಿ ಹೋಗಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.


ಇದಲ್ಲದೆ ಕ್ರಿಸ್ತನಲ್ಲಿದ್ದು ಸತ್ತುಹೋದವರು ನಾಶವಾಗಿದ್ದಾರೆ.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದ್ದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ.


ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.


ಸಹೋದರ ಸಹೋದರಿಯರೇ, ಸತ್ತುಹೋದ ಜನರ ಬಗ್ಗೆ ನೀವು ತಿಳಿದುಕೊಳ್ಳಬೇಕೆಂಬುದು ನಮ್ಮ ಅಪೇಕ್ಷೆ. ನಿರೀಕ್ಷೆಯಿಲ್ಲದ ಜನರಂತೆ ನೀವು ದುಃಖದಿಂದಿರುವುದು ನಮಗೆ ಇಷ್ಟವಿಲ್ಲ.


ನಾವು ತನ್ನೊಂದಿಗೆ ಜೀವಿಸಲೆಂದು ಯೇಸು ನಮಗಾಗಿ ಸತ್ತನು. ಯೇಸು ಪ್ರತ್ಯಕ್ಷನಾದಾಗ, ನಾವು ಜೀವಿಸುತ್ತಿರುತ್ತೇವೋ ಇಲ್ಲವೆ ಸತ್ತಿರುತ್ತೇವೋ ಎಂಬುದು ಮುಖ್ಯವಲ್ಲ.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು