Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:17 - ಪರಿಶುದ್ದ ಬೈಬಲ್‌

17 ಅನಂತರ, ಇನ್ನೂ ಜೀವದಿಂದುಳಿದಿರುವ ನಾವು ಸತ್ತವರೊಡನೆ ಒಂದುಗೂಡುವೆವು. ಪ್ರಭುವನ್ನು ಅಂತರಿಕ್ಷದಲ್ಲಿ ಎದುರುಗೊಳ್ಳಲು ನಾವು ಮೇಘಗಳ ನಡುವೆ ಎತ್ತಲ್ಪಡುವೆವು. ಹೀಗೆ ನಾವು ಯಾವಾಗಲೂ ಪ್ರಭುವಿನೊಂದಿಗೆ ಇರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘವಾಹನರಾಗಿ ಫಕ್ಕನೆ ಒಯ್ಯಲ್ಪಡುವೆವು; ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ತನ್ನಾ ಪತರ್ ಝಿತ್ತೆ ಹೊತ್ತ್ಯಾಕ್ನಿ ಅಮ್ಕಾ ತೆಂಚ್ಯಾ ವಾಂಗ್ಡಾ ಕ್ರಿಸ್ತಾಕ್ ಭೆಟುಕ್ ಅಂತ್ರಾಳಾರ್ ಮೊಡಾಂಚ್ಯಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊತಾ, ಹೆಚ್ಯಾ ಮಾನಾ ಅಮಿ ಸದ್ದಿಚ್ ಧನಿಯಾಚ್ಯಾ ವಾಂಗ್ಡಾ ರ್‍ಹಾತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:17
33 ತಿಳಿವುಗಳ ಹೋಲಿಕೆ  

ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.


ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.


ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.


ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವಂತ ಸಂದೇಶವನ್ನೇ. ಪ್ರಭುವು ಮತ್ತೆ ಬಂದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿಂದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿಂತಲೂ ನಾವು ಮುಂದಿನವರಾಗುವುದಿಲ್ಲ.


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


“ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.


ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.


ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.


ಆ ಸ್ತ್ರೀಯು ಅವನು ಎಲ್ಲಾ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವ ಒಂದು ಗಂಡು ಮಗುವನ್ನು ಹೆತ್ತಳು. ಅವಳ ಮಗುವನ್ನು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ತೆಗೆದುಕೊಂಡು ಹೋಗಲಾಯಿತು.


ಆದ್ದರಿಂದ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಪ್ರಭುವಿನೊಂದಿಗೆ ವಾಸಿಸುವುದನ್ನೇ ನಿಜವಾಗಿಯೂ ಅಪೇಕ್ಷಿಸುತ್ತೇವೆ.


ಯೇಸು, “ಹೌದು, ನಾನೇ ದೇವರ ಮಗನು. ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀನು ಕಾಣುವೆ” ಎಂದು ಉತ್ತರಿಸಿದನು.


ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.


ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.


ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.


ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.


ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.


ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.


ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ.


ನಿಮ್ಮ ಹೃದಯಗಳು ಬಲಗೊಳ್ಳಲೆಂದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊಂದಿಗೆ ಪ್ರತ್ಯಕ್ಷನಾದಾಗ ನೀವು ತಂದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ನಾವು ತನ್ನೊಂದಿಗೆ ಜೀವಿಸಲೆಂದು ಯೇಸು ನಮಗಾಗಿ ಸತ್ತನು. ಯೇಸು ಪ್ರತ್ಯಕ್ಷನಾದಾಗ, ನಾವು ಜೀವಿಸುತ್ತಿರುತ್ತೇವೋ ಇಲ್ಲವೆ ಸತ್ತಿರುತ್ತೇವೋ ಎಂಬುದು ಮುಖ್ಯವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು