Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:9 - ಪರಿಶುದ್ದ ಬೈಬಲ್‌

9 ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆಂಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆಂಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಹೋದರಸ್ನೇಹ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದು ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವುದು ಅವಶ್ಯವಿಲ್ಲ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂದು ನೀವು ದೇವರಿಂದಲೇ ಉಪದೇಶ ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚ್ಯಾ ವಾಂಗುಡ್ಚ್ಯಾ ಕ್ರಿಸ್ತಾ ವರ್ತಿ ವಿಶ್ವಾಸ್ ಕರಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ, ತುಮಿ ಕಶೆ ಪ್ರೆಮಾನಿ ರ್‍ಹಾವ್ಚೆ ಮನುನ್ ಮಿಯಾ ತುಮ್ಕಾ ಲಿವ್ತಲಿ ಗರಜ್ ನಾ. ತುಮ್ಚ್ಯಾ ಎವ್ಡ್ಯಾಕ್ ತುಮಿ ಎಕಾಮೆಕಾತ್ನಿ ಕಶೆ ಪ್ರೆಮಾನ್ ರ್‍ಹಾವ್ಚೆ ಮನುನ್ ದೆವಾಕ್ನಾಚ್ ತುಮಿ ಶಿಕ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:9
30 ತಿಳಿವುಗಳ ಹೋಲಿಕೆ  

ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ನೀವು ಆರಂಭದಿಂದಲೂ ಕೇಳಿದ ವಾಕ್ಯ.


ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.


ದೇವರ ಆಜ್ಞೆ ಏನೆಂದರೆ ಆತನ ಮಗನಾದ ಯೇಸು ಕ್ರಿಸ್ತನಲ್ಲಿ ನಾವು ನಂಬಿಕೆಯಿಟ್ಟು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ದೇವರು ನಮಗೆ ನೀಡಿರುವ ಆಜ್ಞೆಯಾಗಿದೆ.


ನೀವು ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾಗಿರುವುದರಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ.


ಸಹೋದರ ಸಹೋದರಿಯರೇ, ಈಗ ನಾವು ಕಾಲ ಮತ್ತು ದಿನಗಳ ಬಗ್ಗೆ ನಿಮಗೆ ಬರೆಯುವ ಅವಶ್ಯವಿಲ್ಲ.


ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿದ್ದಾನೆ. ಬೇರೊಬ್ಬನನ್ನು ಪಾಪಕ್ಕೆ ನಡೆಸುವಂಥದ್ದೇನೂ ಅವನಲ್ಲಿರುವುದಿಲ್ಲ.


ದೇವರ ಸೇವೆಗೆ ಸಹೋದರ ಸ್ನೇಹವನ್ನೂ ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಸೇರಿಸಿರಿ


ನೀವು ಒಬ್ಬರನ್ನೊಬ್ಬರು ಎಡಬಿಡದೆ ಪ್ರೀತಿಸುವುದು ಬಹಳ ಮುಖ್ಯವಾದುದು. ಪ್ರೀತಿಯು ಅನೇಕ ಪಾಪಗಳನ್ನು ಅಡಗಿಸಿಬಿಡುತ್ತದೆ.


ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.


“ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.”


ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.


ಎರಡನೆಯ ಆಜ್ಞೆಯು ಮೊದಲನೆಯ ಆಜ್ಞೆಯಷ್ಟೇ ಪ್ರಮುಖವಾಗಿದೆ. ‘ನೀನು ನಿನ್ನನ್ನು ಪ್ರೀತಿಸುವಂತೆಯೇ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಆ ಆಜ್ಞೆ.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


ಒಬ್ಬನು ಅದನ್ನು ಮೂರನೆಯ ದಿನದಲ್ಲಿ ತಿಂದರೆ ಅವನು ಪಾಪಮಾಡಿದ ದೋಷಿಯಾಗಿರುವನು. ಯಾಕೆಂದರೆ ಯೆಹೋವನಿಗೆ ಮೀಸಲಾದ ಪವಿತ್ರ ವಸ್ತುಗಳ ವಿಷಯದಲ್ಲಿ ಅವನಿಗೆ ಗೌರವವಿಲ್ಲ; ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ.


ಆತ್ಮಿಕತೆಯಲ್ಲಿ ಪರಿಪೂರ್ಣವಾದ ಮಟ್ಟಕ್ಕೆ ಬಂದಿರುವ ನಾವೆಲ್ಲರೂ ಇದೇ ರೀತಿ ಯೋಚಿಸಬೇಕು. ನೀವು ಈ ಸಂಗತಿಗಳಲ್ಲಿ ಯಾವುದನ್ನಾದರೂ ಒಪ್ಪಿಕೊಳ್ಳದಿದ್ದರೆ ದೇವರೇ ನಿಮಗೆ ಅದನ್ನು ಸ್ಪಷ್ಟಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು