Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:1 - ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಈಗ ನಾವು ಕಾಲ ಮತ್ತು ದಿನಗಳ ಬಗ್ಗೆ ನಿಮಗೆ ಬರೆಯುವ ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ಇದೆಲ್ಲ ನಡೆಯಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಈ ಸಂಗತಿಗಳು ನಡೆಯಬೇಕಾದ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವದು ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಭಾವಾನು ಅನಿ ಭೆನಿಯಾನು, ಖಲ್ಯಾ ಎಳಾರ್ ಅನಿ ಖಲ್ಯಾ ದಿಸಿ ಹೆ ಸಗ್ಳೆ ಘಡ್ನಾರ್ ಹಾಯ್ ಮನುನ್ ಎಳ್ ಅನಿ ಕಾಲ್ ಮಿಯಾ ತುಮ್ಕಾ ಲಿವ್ತಲಿ ಗರಜ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:1
8 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೇ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ.


ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆಂಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆಂಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.


“ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.


ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.


ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ.


ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು