Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:12 - ಪರಿಶುದ್ದ ಬೈಬಲ್‌

12 ಸಹೋದರ ಸಹೋದರಿಯರೇ, ಈಗ ನಿಮ್ಮಲ್ಲಿ ಪ್ರಯಾಸದಿಂದ ಕೆಲಸ ಮಾಡುತ್ತಾ ನಿಮ್ಮನ್ನು ಪ್ರಭುವಿನ ಮಾರ್ಗದಲ್ಲಿ ನಡೆಸುವವರನ್ನು ಮತ್ತು ಉಪದೇಶಿಸುವವರನ್ನು ಗೌರವಿಸಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಹೋದರರೇ, ನಿಮ್ಮೊಡನೆ ದುಡಿಯುತ್ತಾ ಪ್ರಭುವಿನ ಹೆಸರಿನಲ್ಲಿ ನಿಮಗೆ ಅಧಿಕಾರಿಗಳೂ ಮಾರ್ಗದರ್ಶಕರೂ ಆಗಿರುವವರಿಗೆ ತಕ್ಕ ಸನ್ಮಾನವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಕ್ರಿಸ್ತಾಂವ್ ಜಿವನಾಸಾಟ್ನಿ ತುಮ್ಚ್ಯಾ ಮದ್ದಿ ಜೆ ಕೊನ್ ಕಾಮ್ ಕರ್‍ತಾ, ತುಮ್ಕಾ ಶಿಕ್ವುತಾ ಅನಿ ತುಮ್ಕಾ ಚಾಲ್ವುನ್ ನ್ಹೆತಾ, ತೆಂಕಾ ಬರೆ ಕರುನ್ ಮಾನ್ ದಿವಾ ಮನುನ್ ಅಮಿ ತುಮ್ಚ್ಯಾಕ್ಡೆ ಹಾತ್ ಜೊಡುನ್ ಮಾಗ್ತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:12
42 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ಅವರು ನನ್ನ ಆತ್ಮಕ್ಕೂ ನಿಮ್ಮ ಆತ್ಮಗಳಿಗೂ ವಿಶ್ರಾಂತಿಯನ್ನು ಕೊಟ್ಟಿದ್ದಾರೆ. ಇಂಥ ಜನರ ಮೌಲ್ಯವನ್ನು ನೀವು ಗುರುತಿಸಬೇಕು.


ಈ ರೀತಿಯ ಮುಂದಾಳುಗಳನ್ನು ಮತ್ತು ಅವರೊಂದಿಗೆ ಕೆಲಸ ಮಾಡುವವರನ್ನು ಹಾಗೂ ಸೇವೆ ಮಾಡುವವರನ್ನು ಹಿಂಬಾಲಿಸಿರಿ.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ತಕ್ಕಕಾಲ ಬಂದಾಗ ದೇವರು ಆ ನಿತ್ಯಜೀವವನ್ನು ಲೋಕಕ್ಕೆ ಪ್ರಕಟಿಸಿದನು. ನನಗೊಪ್ಪಿಸಿರುವ ಈ ಸಂದೇಶವನ್ನು ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರವಾಗಿ ಸಾರುತ್ತಿದ್ದೇನೆ.


ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;


ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ಆ ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಆ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ.


ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.


ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.


ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು.


ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.


ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.


ನಿಮ್ಮ ವಿಷಯದಲ್ಲಿ ನನಗೆ ಭಯವಾಗಿದೆ. ನಿಮಗೋಸ್ಕರ ನಾನು ಪಟ್ಟ ಪ್ರಯಾಸವು ವ್ಯರ್ಥವಾಗುವುದೆಂಬ ಭಯ ನನಗಿದೆ.


ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ದೇವರನ್ನು ಮೆಚ್ಚಿಸಬೇಕೆಂಬುದೊಂದೇ ನಮಗಿರುವ ಉದ್ದೇಶವಾಗಿದೆ. ನಾವು ನಮ್ಮ ದೇಹದಲ್ಲಿ ಇಲ್ಲಿ ವಾಸವಾಗಿರುವಾಗಲೂ ಪ್ರಭುವಿನೊಂದಿಗೆ ಅಲ್ಲಿ ವಾಸವಾಗಿರುವಾಗಲೂ ಆತನನ್ನು ಮೆಚ್ಚಿಸಬೇಕೆಂಬುದೊಂದೇ ನಮ್ಮ ಬಯಕೆಯಾಗಿದೆ.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.


“ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.


“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಹರಿತವಾದ ಇಬ್ಬಾಯಿಖಡ್ಗವನ್ನು ಹೊಂದಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ.


ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ.


ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.


ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.


ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.


ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು.


ವೃದ್ಧ ಪುರುಷರೊಂದಿಗೆ ಕೋಪದಿಂದ ಮಾತಾಡದೆ ಅವರನ್ನು ನಿನ್ನ ತಂದೆಯೆಂದು ಭಾವಿಸಿ ಅವರೊಂದಿಗೆ ಮಾತನಾಡು. ಯೌವನಸ್ಥರನ್ನು ಸಹೋದರರಂತೆಯೂ


ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು.


ಮರಿಯಳಿಗೆ ನನ್ನ ವಂದನೆ ತಿಳಿಸಿರಿ. ಆಕೆ ನಿಮಗೋಸ್ಕರ ಬಹು ಕಷ್ಟಪಟ್ಟು ಕೆಲಸ ಮಾಡಿದಳು.


ತ್ರುಫೈನಳಿಗೂ ತ್ರುಫೋಸಳಿಗೂ ನನ್ನ ವಂದನೆ ತಿಳಿಸಿರಿ. ಅವರು ಪ್ರಭುವಿಗಾಗಿ ಬಹು ಕಷ್ಟಪಟ್ಟು ಸೇವೆ ಮಾಡುತ್ತಿದ್ದಾರೆ. ನನ್ನ ಪ್ರಿಯ ಸಹೋದರಿಯಾದ ಪೆರ್ಸೀಸಳಿಗೂ ನನ್ನ ವಂದನೆ ತಿಳಿಸಿರಿ. ಆಕೆಯು ಸಹ ಪ್ರಭುವಿಗೋಸ್ಕರ ಬಹು ಕಷ್ಟಪಟ್ಟು ಸೇವೆ ಮಾಡಿದಳು.


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು