Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:21 - ಪರಿಶುದ್ದ ಬೈಬಲ್‌

21 ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ಎಲ್ಲವನ್ನೂ ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಸಗ್ಳೆ ತಪಾಸುನ್ ಬಗಾ; ಅನಿ ಖಲೆ ಬರೆ ಹಾಯ್ ತೆ ಎವ್ಡೆಚ್ ಥವ್ನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:21
40 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಪ್ರಭುವಿಗೆ ಯಾವುದು ಮೆಚ್ಚಿಕೆಯಾದದ್ದೆಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿ.


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


“ನೀವೇ ನ್ಯಾಯನಿರ್ಣಯವನ್ನು ಮಾಡಬಾರದೇಕೆ?


ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಒಳಿತುಕೆಡಕುಗಳಿಗಿರುವ ವ್ಯತ್ಯಾಸವನ್ನು ಅರಿತುಕೊಂಡು ಒಳ್ಳೆಯದನ್ನೇ ಆರಿಸಿಕೊಳ್ಳುವಂಥವರಾಗಬೇಕು; ಕ್ರಿಸ್ತನ ಬರುವಿಕೆಯಲ್ಲಿ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕು.


ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.


ನಾನು ಬರುವ ತನಕ ಈಗ ನೀವಿರುವಂತೆಯೇ ಇರಿ.


ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.


ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


“ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.


ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಅನೇಕ ಕೆಡಕುಗಳನ್ನು ಮಾಡಿದನು. ಅವನು ಮಾಡಿದ ಕೃತ್ಯಗಳಿಗಾಗಿ ಪ್ರಭುವು ಅವನನ್ನು ದಂಡಿಸುವನು.


ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ.


ಇದು ಹೇಗೆಂದರೆ: ಒಬ್ಬನ ಆಲೋಚನೆಗಳು ಅವನ ಆಂತರ್ಯದಲ್ಲಿರುವ ಜೀವಾತ್ಮವೊಂದಕ್ಕೆ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ. ಅಂತೆಯೇ, ದೇವರ ಆಲೋಚನೆಗಳು ದೇವರಾತ್ಮನ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. ನನ್ನ ತಾಯಿಯ ಮನೆಗೆ, ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು.


ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ!


ಅವರಲ್ಲಿ ಕೆಲವರು ಮನೆಗಳಿಗೆ ನುಸುಳಿಕೊಂಡು ಹೋಗಿ, ಪಾಪಿಷ್ಠರಾದ ಸ್ತ್ರೀಯರನ್ನು ವಶಪಡಿಸಿಕೊಳ್ಳುತ್ತಾರೆ. ಆ ಸ್ತ್ರೀಯರು ಅನೇಕ ಪಾಪದೋಷಗಳಿಂದ ತುಂಬಿದವರಾಗಿದ್ದಾರೆ.


ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.


ಎಲ್ಲಾ ವಿಧವಾದ ಕೆಟ್ಟತನದಿಂದ ದೂರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು