Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:16 - ಪರಿಶುದ್ದ ಬೈಬಲ್‌

16 ಇನ್ನೊಂದು ಸಮಯದಲ್ಲಿ ದಾವೀದನು ಕೋಟೆಯೊಳಗಿದ್ದನು. ಫಿಲಿಷ್ಟಿಯರ ಸೈನ್ಯ ಬೆತ್ಲೆಹೇಮಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಸಮಯದಲ್ಲಿ ದಾವೀದನು ಭದ್ರವಾದ ದಿಣ್ಣೆಯ ಮೇಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮನ್ನು ವಶಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೇತ್ಲೆಹೇವಿುನಲ್ಲಿ ಒಂದು ಕಾವಲುದಂಡನ್ನು ಇಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:16
10 ತಿಳಿವುಗಳ ಹೋಲಿಕೆ  

ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಆ ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಈ ಪ್ರವಾದಿಗಳು ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ.


ಫಿಲಿಷ್ಟಿಯರ ಸೈನ್ಯದ ಒಂದು ಗುಂಪು ಮಿಕ್ಮಾಷಿನ ಕಣಿವೆಗೆ ಕಾವಲಾಗಿತ್ತು.


ಇಸ್ರೇಲರೆಲ್ಲರೂ ಈ ಸುದ್ದಿಯನ್ನು ಕೇಳಿ, “ಸೌಲನು ಫಿಲಿಷ್ಟಿಯರ ನಾಯಕನನ್ನು ಕೊಂದನು. ಈಗ ಫಿಲಿಷ್ಟಿಯರು ಇಸ್ರೇಲರನ್ನು ನಿಜವಾಗಿಯೂ ದ್ವೇಷಿಸುತ್ತಾರೆ” ಎಂದು ಹೇಳಿದರು. ಇಸ್ರೇಲರೆಲ್ಲ ಗಿಲ್ಗಾಲಿನಲ್ಲಿ ಸೌಲನನ್ನು ಜೊತೆಸೇರಲು ಕರೆಹೋಯಿತು.


ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನನ್ನು ಕೂಗಿಕೊಳ್ಳುವೆನು.


ಸೌಲನು ಮತ್ತು ಅವನ ಜನರು ದಾವೀದನನ್ನು ಕಂಡುಹಿಡಿಯಲು ಹೋದರು. ಆದರೆ ದಾವೀದನನ್ನು ಜನರು ಎಚ್ಚರಿಸಿದರು. ಸೌಲನು ಅವನನ್ನು ಹುಡುಕುತ್ತಿರುವನೆಂದು ಜನರು ಅವನಿಗೆ ಹೇಳಿದರು. ದಾವೀದನು ಮಾವೋನಿನ ಅರಣ್ಯದಲ್ಲಿರುವ ಕಡಿದಾದ ಬೆಟ್ಟಕ್ಕೆ ಹೋದನು. ದಾವೀದನು ಮಾವೋನಿನ ಅರಣ್ಯಕ್ಕೆ ಹೋದನೆಂಬುದನ್ನು ಕೇಳಿದ ಸೌಲನು ದಾವೀದನನ್ನು ಕಂಡುಹಿಡಿಯಲು ಆ ಸ್ಥಳಕ್ಕೆ ಹೋದನು.


ದಾವೀದನು ಗತ್ ಊರನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.


ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಈ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟುಹೋದನು.


ದಾಹಗೊಂಡಿದ್ದ ದಾವೀದನು ತನ್ನ ಊರಿನ ನೀರು ಕುಡಿಯಲು ಬಯಸಿ, “ಬೆತ್ಲೆಹೇಮಿನ ನಗರದ್ವಾರದ ಬಳಿಯಲ್ಲಿರುವ ಬಾವಿಯಿಂದ ಯಾರಾದರೂ ನೀರು ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಅವನು ತಿಳಿಸಿದನು.


ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ರಾಜನ ಹತ್ತಿರ ಬಿಟ್ಟನು. ದಾವೀದನ ತಂದೆತಾಯಿಗಳು ಅವನು ಕೋಟೆಯಲ್ಲಿರುವ ತನಕ ಮೋವಾಬಿನ ರಾಜನೊಂದಿಗೆ ನೆಲೆಸಿದರು.


ಆದರೆ ಗಾದ್ ಪ್ರವಾದಿಯು ದಾವೀದನಿಗೆ, “ನೀನು ಕೋಟೆಯಲ್ಲಿರಬೇಡ. ಯೆಹೂದ್ಯರ ದೇಶಕ್ಕೆ ಹೋಗು” ಎಂದು ಹೇಳಿದನು. ಆದ್ದರಿಂದ ದಾವೀದನು ಹೆರೆತ್ ಅರಣ್ಯಕ್ಕೆ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು