Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:20 - ಪರಿಶುದ್ದ ಬೈಬಲ್‌

20 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಆ ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜಿಯಿಂದ ಮುನ್ನೂರು ಮಂದಿಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೋವಾಬನ ಸಹೋದರ ಅಬ್ಷೈ ‘ಮೂವತ್ತು ಪ್ರಮುಖ ವೀರರು,’ ಎಂಬ ಪಡೆಯ ನಾಯಕನಾಗಿದ್ದನು . ಅವನು ತನ್ನ ಈಟಿಯಿಂದ ಮುನ್ನೂರು ಜನರಿಗೆ ವಿರೋಧವಾಗಿ ಹೋರಾಡಿ ಅವರನ್ನು ಕೊಂದುಹಾಕಿ ‘ಮೂವತ್ತು ಪ್ರಮುಖ ವೀರರು ‘ ಎಂಬ ಪಡೆಯಲ್ಲಿ ಪ್ರಖ್ಯಾತ ನಾದನು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೋವಾಬನ ತಮ್ಮನಾದ ಅಬ್ಷೈಯು [ಬೇರೆ] ಮೂರು ಮಂದಿಯಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:20
10 ತಿಳಿವುಗಳ ಹೋಲಿಕೆ  

ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.


ಅವರ ತಂಗಿಯಂದಿರು ಯಾರೆಂದರೆ, ಚೆರೂಯ ಮತ್ತು ಅಬೀಗೈಲ್, ಚೆರೂಯಳ ಮೂರುಮಕ್ಕಳು ಯಾರೆಂದರೆ, ಅಬ್ಷೈ, ಯೋವಾಬ್ ಮತ್ತು ಅಸಾಹೇಲ್.


ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.


ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.


ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.


ಅಸಾಹೇಲನನ್ನು ಗಿಬ್ಯೋನ್ ಯುದ್ಧದಲ್ಲಿ ಅಬ್ನೇರನು ಕೊಂದುಹಾಕಿದನು. ಆದ್ದರಿಂದ ಅಸಾಹೇಲನ ಸಹೋದರರಾದ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದರು.


ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.


“ದೇವರೇ, ನಾನು ಈ ನೀರನ್ನು ಕುಡಿಯಲಾರೆನು. ಯಾಕೆಂದರೆ ನನಗಾಗಿ ತಮ್ಮ ಪ್ರಾಣ ಕೊಡಲು ಹೆದರದೆ ನೀರನ್ನು ತಂದವರ ರಕ್ತವಿದು” ಎಂದು ದಾವೀದನು ಅರಿಕೆಮಾಡಿ ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ರೀತಿಯಾಗಿ ಅನೇಕ ಪರಾಕ್ರಮದ ಕಾರ್ಯಗಳನ್ನು ಈ ಮೂರು ಮಂದಿ ವೀರರು ಮಾಡಿದರು.


ಅಬ್ಷೈಯು ಮೂವತ್ತು ಮಂದಿ ರಣವೀರರಿಗಿಂತಲೂ ಎರಡರಷ್ಟು ಪರಾಕ್ರಮಿಯಾಗಿದ್ದನು. ಅವನು ಅವರಿಗೆ ನಾಯಕನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು