ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.
ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು.
ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.
ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.