Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:8 - ಪರಿಶುದ್ದ ಬೈಬಲ್‌

8 ಪಟ್ಟಣದ ಸುತ್ತಲೂ ದಾವೀದನು ಕೋಟೆಯನ್ನು ಕಟ್ಟಿಸಿದನು. ಮಿಲ್ಲೋವಿನಿಂದ ಪ್ರಾರಂಭಿಸಿ ಕೋಟೆಯವರೆಗೆ ಪಟ್ಟಣವನ್ನು ಕಟ್ಟಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಸರಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗುಡ್ಡದ ಪೂರ್ವದಿಕ್ಕಿನ ಸ್ಥಳವನ್ನು ಮಟ್ಟಮಾಡಿ ಪಟ್ಟಣವನ್ನು ಪುನಃ ಕಟ್ಟಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ವಿುಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಪಟ್ಟಣವನ್ನು ಪುನಃ ಕಟ್ಟಿದನು. ಆದರೆ ಪಟ್ಟಣದ ಉಳಿದ ಭಾಗವನ್ನು ಯೋವಾಬನು ಭದ್ರಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:8
8 ತಿಳಿವುಗಳ ಹೋಲಿಕೆ  

ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.


ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.


ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು.


ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.


ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.


ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.


ದಾವೀದನು ಕೋಟೆಯೊಳಗೆ ತನಗೆ ಮನೆ ಮಾಡಿಕೊಂಡನು. ಆದ್ದರಿಂದ ಅದಕ್ಕೆ ದಾವೀದನಗರ ಎಂಬ ಹೆಸರು ಬಂತು.


ದಾವೀದನು ದಿನದಿಂದ ದಿನಕ್ಕೆ ಬಲಶಾಲಿಯಾದನು. ಸರ್ವಶಕ್ತನಾದ ದೇವರು ಅವನೊಂದಿಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು