Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:32 - ಪರಿಶುದ್ದ ಬೈಬಲ್‌

32 ಇಸ್ಸಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಆಜ್ಞೆಗೆ ಒಳಪಟ್ಟವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಸ್ಸಾಕಾರ ಗೋತ್ರದಿಂದ: 200 ಜನ ನಾಯಕರು ಹಾಗೂ ಅವರೊಂದಿಗಿದ್ದ ಸೈನಿಕರು; (ಇಸ್ರಯೇಲರು ಏನು ಮಾಡಬೇಕು, ಅದನ್ನು ಮಾಡಲು ಯಾವುದು ಉತ್ತಮ ಸಮಯ ಎಂಬುದನ್ನು ಈ ನಾಯಕರು ತಿಳಿದಿದ್ದರು);

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಸ್ಸಾಕಾರ್ಯರಿಂದ ಇನ್ನೂರು ಮಂದಿ ಮುಖ್ಯಸ್ಥರು; ಇವರು ಸಮಯೋಚಿತ ಜ್ಞಾನವುಳ್ಳವರಾಗಿ ಇಸ್ರಾಯೇಲ್ಯರು ಮಾಡತಕ್ಕದ್ದನ್ನು ಅರಿತವರು; ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಒಳಗಾಗಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:32
15 ತಿಳಿವುಗಳ ಹೋಲಿಕೆ  

ನಿಮ್ಮ ಜೀವಿತಗಳ ಬಗ್ಗೆ ಮೂರ್ಖರಾಗಿರದೆ ದೇವರ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.


ಕಾನೂನು ಮತ್ತು ದಂಡನೆಗಳ ಬಗ್ಗೆ ಪರಿಣಿತರಾಗಿದ್ದ ಮಂತ್ರಿಗಳ ಸಲಹೆ ಕೇಳುವುದು ರಾಜನ ವಾಡಿಕೆಯಾಗಿತ್ತು. ಅದೇ ಪ್ರಕಾರ ರಾಜನು ತನ್ನ ಸಲಹೆಗಾರರೊಂದಿಗೆ ಈ ವಿಷಯವನ್ನು ಆಲೋಚಿಸಿದನು. ಇವರು ರಾಜನಿಗೆ ನಿಕಟವರ್ತಿಗಳಾಗಿದ್ದರು. ಅವರು ಯಾರೆಂದರೆ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷಿಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಮೇದ್ಯ, ಪಾರಸಿಯ ಪ್ರಮುಖ ಅಧಿಕಾರಿಗಳು.


ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.


ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.


ಒಳ್ಳೆಯದನ್ನೇ ಮಾಡುವ ಮತ್ತು ಪಾಪವನ್ನೇ ಮಾಡದ ನೀತಿವಂತನು ಭೂಮಿಯ ಮೇಲೆ ಇಲ್ಲವೇ ಇಲ್ಲ. ಜ್ಞಾನವು ಒಬ್ಬನಿಗೆ ಶಕ್ತಿಯನ್ನು ಕೊಡುತ್ತದೆ. ಒಬ್ಬ ಜ್ಞಾನಿಯು ನಗರದಲ್ಲಿರುವ ಹತ್ತುಮಂದಿ ಮೂಢ ನಾಯಕರುಗಳಿಗಿಂತಲೂ ಬಲಶಾಲಿ.


ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.


ಜ್ಞಾನವು ಮನುಷ್ಯನನ್ನು ಬಲಿಷ್ಠನನ್ನಾಗಿ ಮಾಡುವುದು. ವಿವೇಕವು ಮನುಷ್ಯನಿಗೆ ಬಲವನ್ನು ಕೊಡುತ್ತದೆ.


“ಇಸ್ಸಾಕಾರನು ಬಹಳ ಕಷ್ಟಪಟ್ಟು ದುಡಿಯುವ ಕತ್ತೆಯಂತಿದ್ದಾನೆ. ಅವನು ಭಾರವಾದ ಹೊರೆಯನ್ನು ಹೊರುವುದರಿಂದ ಮಲಗಿ ವಿಶ್ರಮಿಸಿಕೊಳ್ಳುವನು.


ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು.


ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.


ಮನಸ್ಸೆಯ ಅರ್ಧಕುಲದಿಂದ ಹದಿನೆಂಟು ಸಾವಿರ ಮಂದಿ ಇದ್ದರು. ದಾವೀದನನ್ನು ಅರಸನನ್ನಾಗಿ ಮಾಡಲು ಇವರನ್ನು ಹೆಸರುಹೆಸರಾಗಿ ಕರೆಸಲಾಗಿತ್ತು.


ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”


ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು