Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:39 - ಪರಿಶುದ್ದ ಬೈಬಲ್‌

39 ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವರುದಾವೀದನೊಂದಿಗೆ, ತಮ್ಮ ಸಹಬಾಂಧವರು ಸಿದ್ಧಪಡಿಸಿದ ಆಹಾರ ಪಾನೀಯಗಳನ್ನು ಸೇವಿಸುತ್ತಾ, ಮೂರು ದಿನಗಳನ್ನು ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ಅಲ್ಲಿ ಮೂರು ದಿವಸ ದಾವೀದನ ಸಂಗಡ ಇದ್ದು ಅನ್ನಪಾನಗಳನ್ನು ತೆಗೆದುಕೊಂಡರು; ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:39
8 ತಿಳಿವುಗಳ ಹೋಲಿಕೆ  

ಯೆಹೂದದ ಜನರೆಲ್ಲರು ಇಸ್ರೇಲರಿಗೆ, “ಏಕೆಂದರೆ ರಾಜನು ನಮ್ಮ ಸಮೀಪದ ಬಂಧು. ಇದರ ಕುರಿತು ನೀವೇಕೆ ನಮ್ಮ ಮೇಲೆ ಕೋಪಗೊಳ್ಳುತ್ತೀರಿ? ರಾಜನ ಖರ್ಚಿನಲ್ಲೇನೂ ನಾವು ಊಟಮಾಡಲಿಲ್ಲ. ರಾಜನು ನಮಗೆ ಯಾವ ಬಹುಮಾನವನ್ನೂ ನೀಡಲಿಲ್ಲ” ಎಂದು ಉತ್ತರಿಸಿದರು.


ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.


ಆದ್ದರಿಂದ ಇಸಾಕನು ಅವರಿಗಾಗಿ ಒಂದು ಔತಣವನ್ನು ಮಾಡಿಸಿದನು. ಅವರೆಲ್ಲರೂ ಸಮೃದ್ಧಿಯಾಗಿ ಊಟಮಾಡಿದರು.


ಇವರೆಲ್ಲರೂ ಧೈರ್ಯಶಾಲಿ ಯೋಧರಾಗಿದ್ದರು. ಇವರೆಲ್ಲಾ ದಾವೀದನನ್ನು ಅರಸನನ್ನಾಗಿ ಮಾಡುವ ಉದ್ದೇಶದಿಂದ ಹೆಬ್ರೋನಿಗೆ ಬಂದರು. ದಾವೀದನು ತಮ್ಮ ಅರಸನಾಗುವುದಕ್ಕೆ ಇಸ್ರೇಲಿನ ಬೇರೆ ಜನರೆಲ್ಲರೂ ಒಪ್ಪಿಗೆಕೊಟ್ಟರು.


ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ದಾವೀದನ ಸೈನ್ಯದಲ್ಲಿ ಪರಾಕ್ರಮಿಗಳಿದ್ದರು. ಈ ಪರಾಕ್ರಮಿಗಳು ದಾವೀದನ ರಾಜ್ಯದಲ್ಲಿ ದಾವೀದನೊಂದಿಗೆ ಮಹಾಬಲಿಷ್ಠರಾದರು. ಅವರು ಮತ್ತು ಎಲ್ಲಾ ಇಸ್ರೇಲರು ದಾವೀದನಿಗೆ ಬೆಂಬಲ ನೀಡಿ ಅವನನ್ನು ರಾಜನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನದ ಪ್ರಕಾರವೇ ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು