Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:40 - ಪರಿಶುದ್ದ ಬೈಬಲ್‌

40 ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ದೂರದ ಉತ್ತರದಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಗೋತ್ರಗಳ ಜನರು ತಮ್ಮ ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ರೊಟ್ಟಿ, ಅಂಜೂರ, ಒಣದ್ರಾಕ್ಷಿ, ದ್ರಾಕ್ಷಾರಸ, ಎಣ್ಣೆಗಳನ್ನು ಹೊತ್ತುತಂದರು. ಭೋಜನಕ್ಕೆ ಕುರಿದನಗಳನ್ನು ಸಹ ತೆಗೆದುಕೊಂಡು ಬಂದರು. ನಾಡಿನಲ್ಲೆಲ್ಲಾ ಸಂತೋಷ ಸಂಭ್ರಮವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಇದಲ್ಲದೆ ಇಸ್ಸಾಕಾರ್ ಜೆಬುಲೂನ್ ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತಗಳವರು ಎತ್ತು, ಕತ್ತೆ, ಹೇಸರಕತ್ತೆ, ಒಂಟೆ ಇವುಗಳ ಮೇಲೆ ಆಹಾರಪದಾರ್ಥಗಳನ್ನು ಹೇರಿಕೊಂಡು ಬಂದರು. ಅವರು ತಂದವುಗಳಾವವಂದರೆ - ತರತರದ ರೊಟ್ಟಿ, ಅಂಜೂರ ಹಣ್ಣಿನ ಉಂಡೆ, ಒಣಗಿದ ದ್ರಾಕ್ಷೇಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವೇ. ಇಸ್ರಾಯೇಲ್ಯರೊಳಗೆ ಮಹಾ ಸಂತೋಷವಿತ್ತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಇದಲ್ಲದೆ ಅವರ ನೆರೆಯವನಾದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ತಮ್ಮ ಎತ್ತು, ಕತ್ತೆ, ಹೇಸರಗತ್ತೆ ಮತ್ತು ಒಂಟೆಗಳ ಮೇಲೆಯೂ ರೊಟ್ಟಿಗಳನ್ನೂ ಆಹಾರವನ್ನೂ, ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ದನಕುರಿಗಳನ್ನೂ ಬಹಳವಾಗಿ ತಂದರು. ಇಸ್ರಾಯೇಲಿನಲ್ಲಿ ಸಂತೋಷವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:40
14 ತಿಳಿವುಗಳ ಹೋಲಿಕೆ  

ಅಬೀಗೈಲಳು ಇನ್ನೂರು ರೊಟ್ಟಿಗಳನ್ನೂ ಎರಡು ದ್ರಾಕ್ಷಾರಸದ ಚೀಲಗಳನ್ನೂ ಐದು ಕುರಿಗಳ ಬೇಯಿಸಿದ ಮಾಂಸವನ್ನೂ ಹದಿನೇಳು ಕಿಲೋಗ್ರಾಂ ಬೇಯಿಸಿದ ಕಾಳನ್ನೂ ನೂರುಗೊಂಚಲು ಒಣದ್ರಾಕ್ಷಿಯನ್ನೂ ಅಂಜೂರ ಹಣ್ಣಿನ ಇನ್ನೂರು ಉಂಡೆಗಳನ್ನೂ ತ್ವರಿತವಾಗಿ ತೆಗೆದುಕೊಂಡಳು. ಅವಳು ಅವುಗಳನ್ನು ಕತ್ತೆಗಳ ಮೇಲೆ ಹೇರಿದಳು.


ದಾವೀದನು ಆಲೀವ್ ಬೆಟ್ಟದ ಮೇಲೆ ಸ್ವಲ್ಪ ದೂರ ಬಂದನು. ಅಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ದಾವೀದನನ್ನು ಸಂಧಿಸಿದನು. ಚೀಬನ ಹತ್ತಿರ ತಡಿಹಾಕಲ್ಪಟ್ಟ ಎರಡು ಹೇಸರಕತ್ತೆಗಳಿದ್ದವು. ಆ ಹೇಸರಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳು, ಒಂದುನೂರು ಗೊಂಚಲು ಒಣದ್ರಾಕ್ಷಿ, ಒಂದುನೂರು ಹಣ್ಣುಗಳು ಮತ್ತು ದ್ರಾಕ್ಷಾರಸದ ಒಂದು ಚೀಲ ಇದ್ದವು.


ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.


ಸಜ್ಜನರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು.


ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು.


ಜನರೆಲ್ಲರೂ ಸೊಲೊಮೋನನನ್ನು ಹಿಂಬಾಲಿಸುತ್ತಾ ನಗರಕ್ಕೆ ಬಂದರು. ಅವರು ಕೊಳಲುಗಳನ್ನು ಊದುತ್ತಾ ಸಂತಸದಿಂದ ಕೂಗಾಡುತ್ತಾ ಬಂದರು. ಅವರು ಮಾಡಿದ ಶಬ್ದವು ಭೂಮಿಯನ್ನೇ ನಡುಗಿಸುವಂತಿತ್ತು.


ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು.


ದಾವೀದನು ತನ್ನ ಎಲ್ಲಾ ಸೇನಾಧಿಪತಿಗಳೊಂದಿಗೆ ಮಾತನಾಡಿದನು. ಅವನು ಸಹಸ್ರಾಧಿಪತಿಗಳೊಂದಿಗೆ, ಶತಾಧಿಪತಿಗಳೊಂದಿಗೆ ಮತ್ತು ಪ್ರತಿಯೊಬ್ಬ ನಾಯಕನೊಂದಿಗೆ ಚರ್ಚಿಸಿದನು.


ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”


ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು