Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:1 - ಪರಿಶುದ್ದ ಬೈಬಲ್‌

1 ದಾವೀದನು ತನ್ನ ಎಲ್ಲಾ ಸೇನಾಧಿಪತಿಗಳೊಂದಿಗೆ ಮಾತನಾಡಿದನು. ಅವನು ಸಹಸ್ರಾಧಿಪತಿಗಳೊಂದಿಗೆ, ಶತಾಧಿಪತಿಗಳೊಂದಿಗೆ ಮತ್ತು ಪ್ರತಿಯೊಬ್ಬ ನಾಯಕನೊಂದಿಗೆ ಚರ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸ ದಾವೀದನು ಸರ್ವಸಹಸ್ರಾಧಿಪತಿಗಳೊಂದಿಗೂ ಶತಾಧಿಪತಿಗಳೊಂದಿಗೂ ಸಮಾಲೋಚನೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ಸಹಸ್ರಾಧಿಪತಿ ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಮಾತಾಡಿದನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ಸಾವಿರ ಮಂದಿಗೂ, ನೂರು ಮಂದಿಗೂ ಪ್ರಧಾನರಾದವರ ಸಂಗಡ, ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:1
12 ತಿಳಿವುಗಳ ಹೋಲಿಕೆ  

ಹಿಜ್ಕೀಯ ಅರಸನು ಪಟ್ಟಣದ ಅಧಿಕಾರಿಗಳನ್ನು ಮುಂಜಾನೆ ಕರೆಯಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.


ದಾವೀದನು ಚಿಕ್ಲಗಿನಲ್ಲಿ ವಾಸವಾಗಿದ್ದಾಗ ಅವನೊಂದಿಗೆ ಸೇರಿದ ಮನಸ್ಸೆಕುಲದವರು ಯಾರೆಂದರೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಮತ್ತು ಚಿಲ್ಲತೈ. ಇವರೆಲ್ಲರೂ ಮನಸ್ಸೆಕುಲದ ಮುಖ್ಯಾಧಿಕಾರಿಗಳಾಗಿದ್ದರು.


ಯೆಹೂದದ ಮತ್ತು ಜೆರುಸಲೇಮಿನ ನಾಯಕರೆಲ್ಲರೂ ಬಂದು ತನ್ನನ್ನು ಭೇಟಿಯಾಗಬೇಕೆಂದು ರಾಜನಾದ ಯೋಷೀಯನು ಹೇಳಿದನು.


ಇಸ್ಸಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಆಜ್ಞೆಗೆ ಒಳಪಟ್ಟವರೂ ಆಗಿದ್ದರು.


ಇವರೆಲ್ಲಾ ಗಾದ್ಯರ ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಅತಿಬಲಹೀನನಾದವನು ನೂರು ಮಂದಿ ವೈರಿಗಳೊಂದಿಗೆ ಕಾದಾಡಲು ಶಕ್ತನಾಗಿದ್ದನು. ಅವರಲ್ಲಿ ಎಲ್ಲರಿಗಿಂತ ಪರಾಕ್ರಮಿಯು ಒಂದು ಸಾವಿರ ವೈರಿಗಳೊಂದಿಗೆ ಕಾದಾಡಲು ಶಕ್ತನು.


ಇಸ್ರೇಲಿನಲ್ಲಿ ಆರಿಸಲ್ಪಟ್ಟ ಮೂವತ್ತು ಸಾವಿರ ಮಂದಿಯನ್ನು ದಾವೀದನು ಮತ್ತೆ ಒಟ್ಟುಗೂಡಿಸಿದನು.


ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು.


ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗೆಂದನು: “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕರಿಗೂ ಲೇವಿಯರಿಗೂ ಈ ಸಂದೇಶವನ್ನು ಕಳುಹಿಸಿಕೊಡೋಣ: ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ.


ಸೊಲೊಮೋನನು ಇಸ್ರೇಲರನ್ನೂ ಅಂದರೆ ನ್ಯಾಯಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಸೇನಾಧಿಪತಿಗಳನ್ನೂ ಕುಲಪ್ರಧಾನರನ್ನೂ ಕರೆಯಿಸಿ ಅವರೊಂದಿಗೆ ಗಿಬ್ಯೋನಿನ ಉನ್ನತಸ್ಥಳಕ್ಕೆ ಹೋದನು. ದೇವದರ್ಶನಗುಡಾರವು ಅಲ್ಲಿತ್ತು. ಅರಣ್ಯದಲ್ಲಿ ಇಸ್ರೇಲರು ಪ್ರಯಾಣಿಸುತ್ತಿದ್ದಾಗ ಯೆಹೋವನ ಸೇವಕನಾದ ಮೋಶೆಯು ಗುಡಾರವನ್ನು ಮಾಡಿಸಿದ್ದನು.


ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ.


ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು