Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:3 - ಪರಿಶುದ್ದ ಬೈಬಲ್‌

3 ನಾವೆಲ್ಲರೂ ಹೋಗಿ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರೋಣ. ಸೌಲನು ಅರಸನಾಗಿದ್ದಾಗ ನಾವು ಒಡಂಬಡಿಕೆಯ ಪೆಟ್ಟಿಗೆಯ ಬಗ್ಗೆ ಆಸಕ್ತಿವಹಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ನಮ್ಮ ಬಳಿಗೆ ಕೂಡಿಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ ನಮ್ಮ ದೇವಮಂಜೂಷವನ್ನು ತೆಗೆದುಕೊಂಡು ಬರೋಣ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:3
11 ತಿಳಿವುಗಳ ಹೋಲಿಕೆ  

ದಾವೀದನು, “ನಾನು ಹೋಗಿ ಈ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು.


ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲಿ ನನ್ನ ಬಂಧುಗಳ ಮೇಲಾಗಲಿ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.


ಅಹೀಮೆಲೆಕನು ದಾವೀದನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಅಹೀಮೆಲೆಕನು ದಾವೀದನಿಗೆ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನೂ ಕೊಟ್ಟನು” ಎಂದು ಹೇಳಿದನು.


ಸೌಲನು ತನ್ನ ಸೈನಿಕರಿಗೆ, “ಈ ರಾತ್ರಿಯೇ ಫಿಲಿಷ್ಟಿಯರ ಬೆನ್ನಟ್ಟೋಣ. ಅವರಲ್ಲಿರುವುದನ್ನೆಲ್ಲ ವಶಪಡಿಸಿಕೊಂಡು ಅವರನ್ನೆಲ್ಲ ಕೊಲ್ಲೋಣ” ಎಂದು ಹೇಳಿದನು. ಸೈನಿಕರು, “ನಿನಗೆ ಸರಿಕಂಡದ್ದನ್ನು ಮಾಡು” ಎಂದು ಉತ್ತರಕೊಟ್ಟರು. ಆದರೆ ಯಾಜಕನು, “ದೇವರನ್ನು ಕೇಳೋಣ” ಎಂದು ಹೇಳಿದನು.


ಸೌಲನು ಅಹೀಯನಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. (ಆ ಸಮಯದಲ್ಲಿ ದೇವರ ಪವಿತ್ರ ಪೆಟ್ಟಿಗೆಯು ಇಸ್ರೇಲರೊಂದಿಗೆ ಇತ್ತು.)


ನಾವು ಅದರ ಬಗ್ಗೆ ಎಫ್ರಾತದಲ್ಲಿ ಕೇಳಿದೆವು. ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಲ್ಲಿ ಕಂಡುಕೊಂಡೆವು.


ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗೆಂದನು: “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕರಿಗೂ ಲೇವಿಯರಿಗೂ ಈ ಸಂದೇಶವನ್ನು ಕಳುಹಿಸಿಕೊಡೋಣ: ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ.


ಆದ್ದರಿಂದ ಇಸ್ರೇಲರೆಲ್ಲರೂ ದಾವೀದನ ಸಲಹೆಗೆ ಒಪ್ಪಿದರು ಮತ್ತು ಅದು ಯೋಗ್ಯವಾದದ್ದೆಂದು ತೀರ್ಮಾನಿಸಿದರು.


ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದ್ದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು