Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:5 - ಪರಿಶುದ್ದ ಬೈಬಲ್‌

5 ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗೆ ಅರಸ ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ದೇವಮಂಜೂಷವನ್ನು ತರಲು ದೇಶದ ಎಲ್ಲಾ ಕಡೆಗಳಿಂದಲೂ, ದಕ್ಷಿಣದ ಈಜಿಪ್ಟ್ ಗಡಿಯಿಂದ ಉತ್ತರದ ಹಾಮಾತ್ ಕಣಿವೆಯವರೆಗಿನ ಜನರನ್ನು ಒಂದುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ದಾವೀದನು ದೇವಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತರುವದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯವರೆಗೂ ವಾಸಿಸುತ್ತಿದ್ದ ಎಲ್ಲಾ ಇಸ್ರಾಯೇಲ್ಯರನ್ನೂ ಕೂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೀಗೆ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತರುವುದಕ್ಕೆ ದಾವೀದನು ಈಜಿಪ್ಟಿನ ಶೀಹೋರ್ ನದಿ ಮೊದಲ್ಗೊಂಡು ಲಿಬೋ ಹಮಾತಿನ ಪ್ರದೇಶದವರೆಗೆ ಇರುವ ಸಮಸ್ತ ಇಸ್ರಾಯೇಲರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:5
16 ತಿಳಿವುಗಳ ಹೋಲಿಕೆ  

ಕಿರ್ಯತ್ಯಾರೀಮಿನಲ್ಲಿ ಒಬ್ಬ ಯಾಜಕನಿದ್ದನು. ಬೇತ್‌ಷೆಮೆಷಿನ ಜನರು ಕಿರ್ಯತ್ಯಾರೀಮಿನವರ ಬಳಿಗೆ ಸಂದೇಶಕರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ತಂದಿರುವರು. ನೀವು ಬಂದು ಅದನ್ನು ನಿಮ್ಮ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ” ಎಂದು ತಿಳಿಸಿದರು.


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!


ಇಸ್ರೇಲಿನಲ್ಲಿ ಆರಿಸಲ್ಪಟ್ಟ ಮೂವತ್ತು ಸಾವಿರ ಮಂದಿಯನ್ನು ದಾವೀದನು ಮತ್ತೆ ಒಟ್ಟುಗೂಡಿಸಿದನು.


ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು.


ಇಸ್ರೇಲಿನ ಎಲ್ಲಾ ಜನರು ದಾವೀದನೊಂದಿಗೆ ಯೆಹೂದದ ಬಾಳಾ ಎಂಬ ಸ್ಥಳಕ್ಕೆ (ಕೀರ್ಯಾತ್ಯಾರೀಮಿನ ಇನ್ನೊಂದು ಹೆಸರು ಬಾಳಾ.) ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ನಡೆದರು. ಆತನು ಕೆರೂಬಿಗಳ ನಡುವೆ ಆಸೀನನಾಗಿರುತ್ತಾನೆ. ಆ ಪೆಟ್ಟಿಗೆಯು ಯೆಹೋವನ ಹೆಸರಿನಲ್ಲಿ ಕರೆಯಲ್ಪಡುತ್ತದೆ.


ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.


ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.


ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?


ಆದ್ದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು.


ಕಿರ್ಯತ್ಯಾರೀಮಿನ ಜನರು ಬಂದು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು. ಯೆಹೋವನ ಪೆಟ್ಟಿಗೆಯನ್ನು ಬೆಟ್ಟದ ಮೇಲಿದ್ದ ಅಬೀನಾದಾಬನ ಮನೆಯಲ್ಲಿಟ್ಟರು. ಯೆಹೋವನ ಪೆಟ್ಟಿಗೆಯನ್ನು ಕಾಯುವುದಕ್ಕಾಗಿ ಅಬೀನಾದಾಬನ ಮಗನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.


ಆದ್ದರಿಂದ ಇಸ್ರೇಲರೆಲ್ಲರೂ ದಾವೀದನ ಸಲಹೆಗೆ ಒಪ್ಪಿದರು ಮತ್ತು ಅದು ಯೋಗ್ಯವಾದದ್ದೆಂದು ತೀರ್ಮಾನಿಸಿದರು.


ಅವರು ಸಮುದ್ರ ಪ್ರಯಾಣ ಮಾಡುತ್ತಾ ಧಾನ್ಯಕ್ಕಾಗಿ ಹುಡುಕುತ್ತಿದ್ದಾರೆ. ತೂರಿನ ಜನರು ನೈಲ್ ನದಿಯ ಬದಿಗಳಲ್ಲಿ ಬೆಳೆಸುವ ಧಾನ್ಯವನ್ನು ಕೊಂಡುಕೊಂಡು ಇತರ ದೇಶಗಳಿಗೆ ಮಾರುವರು.


ಈ ಪೆಟ್ಟಿಗೆಯು ಕಿರ್ಯತ್ಯಾರೀಮಿನವರಲ್ಲಿ ಬಹುಕಾಲದವರೆಗೆ ಅಂದರೆ ಇಪ್ಪತ್ತು ವರ್ಷಗಳವರೆಗೆ ಇತ್ತು. ಇಸ್ರೇಲರು ಯೆಹೋವನ ಮಾರ್ಗವನ್ನು ಮತ್ತೆ ಅನುಸರಿಸಲು ಆರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು