Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:10 - ಪರಿಶುದ್ದ ಬೈಬಲ್‌

10 ದಾವೀದನು ಯೆಹೋವನಿಗೆ, “ನಾನು ಫಿಲಿಷ್ಟಿಯರ ಸಂಗಡ ಯುದ್ಧಕ್ಕೆ ಹೋಗಬಹುದೇ?” ಎಂದು ವಿಚಾರಿಸಲಾಗಿ ಯೆಹೋವನು ಅವನಿಗೆ, “ಹೋಗು, ನಾನು ನಿನಗೆ ಫಿಲಿಷ್ಟಿಯರ ಮೇಲೆ ಜಯ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಾವೀದನು ದೇವರಾದ ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಫಿಲಿಷ್ಟಿಯರ ಮೇಲೆ ನಾನು ದಾಳಿಮಾಡಬಹುದೊ? ನೀವು ನನಗೆ ಜಯವನ್ನು ಕೊಡುವಿರೋ", ಎಂದು ದಾವೀದನು ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸಿದನು. “ಹೌದು, ಅವರನ್ನು ಎದುರಿಸು, ನಾನು ನಿನಗೆ ಜಯವನ್ನು ಕೊಡುವೆನು,” ಎಂದು ಸರ್ವೇಶ್ವರ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:10
14 ತಿಳಿವುಗಳ ಹೋಲಿಕೆ  

ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.


ದಾವೀದನು ಮತ್ತೆ ಯೆಹೋವನಿಗೆ ಪ್ರಾರ್ಥಿಸಿ ವಿಚಾರಿಸಿದನು. ಯೆಹೋವನು ಅವನ ಪ್ರಾರ್ಥನೆಗೆ ಉತ್ತರಕೊಟ್ಟು, “ದಾವೀದನೇ, ಫಿಲಿಷ್ಟಿಯರನ್ನು ಬೆಟ್ಟದ ಮೇಲೆ ನೀನು ಹಿಂಬಾಲಿಸದಿರು. ಅವರ ಹಿಂದಿನಿಂದ ಹೋಗಿ ಬಾಲ್ಸಾಮ್ ಮರಗಳ ಹಿಂದೆ ಅವಿತುಕೊಂಡಿರು.


ನಾವೆಲ್ಲರೂ ಹೋಗಿ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರೋಣ. ಸೌಲನು ಅರಸನಾಗಿದ್ದಾಗ ನಾವು ಒಡಂಬಡಿಕೆಯ ಪೆಟ್ಟಿಗೆಯ ಬಗ್ಗೆ ಆಸಕ್ತಿವಹಿಸಲಿಲ್ಲ.”


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


ದಾವೀದನು ಯೆಹೋವನಿಗೆ, “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.


ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.


ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಈ ಸಮಯದಲ್ಲಿ ಯೆಹೋವನು ದಾವೀದನಿಗೆ, “ಅಲ್ಲಿಗೆ ಹೋಗಬೇಡ. ಅವರ ಸೈನ್ಯವನ್ನು ಸುತ್ತಿಕೊಂಡು ಹಿಂದಿನಿಂದ ಅವರನ್ನು ಸಮೀಪಿಸು. ಬಾಲ್ಯಾಮ್ ಮರಗಳಿರುವ ಮತ್ತೊಂದು ಕಡೆಯಿಂದ ಅವರ ಮೇಲೆ ಆಕ್ರಮಣ ಮಾಡು.


ಫಿಲಿಷ್ಟಿಯರು ರೆಫಾಯೀಮ್ ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿ ಅವರದನ್ನೆಲ್ಲಾ ದೋಚಿಕೊಂಡರು.


ಆಗ ದಾವೀದನೂ ಅವನ ಸಂಗಡಿಗರೂ ಬಾಳ್ ಪೆರಾಚೀಮ್ ಎಂಬ ಸ್ಥಳದವರೆಗೆ ಹೋಗಿ ಫಿಲಿಷ್ಟಿಯರನ್ನು ನಾಶಮಾಡಿದನು. “ದೇವರು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ದಾಳಿಮಾಡಿ ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ದಾವೀದನು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್ ಎಂದು ಹೆಸರಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು