Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:11 - ಪರಿಶುದ್ದ ಬೈಬಲ್‌

11 ಆಗ ದಾವೀದನೂ ಅವನ ಸಂಗಡಿಗರೂ ಬಾಳ್ ಪೆರಾಚೀಮ್ ಎಂಬ ಸ್ಥಳದವರೆಗೆ ಹೋಗಿ ಫಿಲಿಷ್ಟಿಯರನ್ನು ನಾಶಮಾಡಿದನು. “ದೇವರು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ದಾಳಿಮಾಡಿ ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ದಾವೀದನು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಷ್ಟರಲ್ಲಿ ಬಾಳ್ ಪೆರಾಚೀಮಿಗೆ ಬಂದ ಅವರನ್ನು ದಾವೀದನು ಸೋಲಿಸಿ, “ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ಹೇಳಿದ್ದರಿಂದ ಆ ಯುದ್ಧ ಸ್ಥಳಕ್ಕೆ ಬಾಳ್ ಪೆರಾಚೀಮ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀಗೆ ದಾವೀದ ಬಾಳ್ ಪೆರಾಚೀಮ್ ಎಂಬಲ್ಲಿ ಅವರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನುಗ್ಗಿ, ವೈರಿಸೈನ್ಯವನ್ನು ನಾಶಮಾಡಲು ಸರ್ವೇಶ್ವರ ನನ್ನನ್ನು ಉಪಯೋಗಿಸಿದ್ದಾರೆ,” ಎಂದು ಹೇಳಿದನು. ಈ ಕಾರಣ ಆ ಸ್ಥಳಕ್ಕೆ ‘ಬಾಳ್ ಪೆರಾಚೀಮ್’ ಎಂಬ ಹೆಸರು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಷ್ಟರಲ್ಲಿ ಬಾಳ್‍ಪೆರಾಚೀವಿುಗೆ ಬಂದ ಅವರನ್ನು ದಾವೀದನು ಸೋಲಿಸಿ - ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆಂದು ಹೇಳಿದ್ದರಿಂದ ಆ ಯುದ್ಧಸ್ಥಳಕ್ಕೆ ಬಾಳ್‍ಪೆರಾಚೀಮೆಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:11
11 ತಿಳಿವುಗಳ ಹೋಲಿಕೆ  

ಪೆರಾಚೀಮ್ ಬೆಟ್ಟದ ಮೇಲೆ ಯೆಹೋವನು ಯುದ್ಧ ಮಾಡಿದಂತೆಯೇ ಆತನು ಯುದ್ಧಮಾಡುವನು. ಗಿಬ್ಯೋನ್ ಕಣಿವೆಯಲ್ಲಿ ಯೆಹೋವನು ಕೋಪಗೊಂಡಿದ್ದಂತೆಯೇ ಕೋಪಗೊಳ್ಳುವನು. ಆಗ ಆತನು ಮಾಡಬೇಕಾದ ಕಾರ್ಯಗಳನ್ನು ಮಾಡುವನು. ಯೆಹೋವನು ಕೆಲವು ಅಪರಿಚಿತವಾದ ಸಂಗತಿಗಳನ್ನು ಮಾಡುವನು. ಆದರೆ ಆತನು ತನ್ನ ಕಾರ್ಯವನ್ನು ಮಾಡಿಮುಗಿಸುವನು. ಆ ಕೆಲಸವು ಒಬ್ಬ ಪರಿಚಯವಿಲ್ಲದವನ ಕೆಲಸವಾಗಿದೆ.


ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಬಿಟ್ಟಿತು. ಸಮುದ್ರದೊಳಗೆ ಹೋಗಿದ್ದ ಇಸ್ರೇಲರನ್ನು ಬೆನ್ನಟ್ಟಿದ ಫರೋಹನ ಸೈನ್ಯವೆಲ್ಲಾ ನಾಶವಾಯಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”


ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.


ಅವರು ಗೋಡೆಯನ್ನು ಒಡೆದು ನುಗ್ಗಿಬರಲು ಕಲ್ಲುಗಳು ನನ್ನ ಮೇಲೆ ಬೀಳುವವು.


ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದ್ದರಿಂದ ಅವನು ಆ ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು.


ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು.


ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ದಾವೀದನು ಯೆಹೋವನಿಗೆ, “ನಾನು ಫಿಲಿಷ್ಟಿಯರ ಸಂಗಡ ಯುದ್ಧಕ್ಕೆ ಹೋಗಬಹುದೇ?” ಎಂದು ವಿಚಾರಿಸಲಾಗಿ ಯೆಹೋವನು ಅವನಿಗೆ, “ಹೋಗು, ನಾನು ನಿನಗೆ ಫಿಲಿಷ್ಟಿಯರ ಮೇಲೆ ಜಯ ಕೊಡುವೆನು” ಎಂದು ಹೇಳಿದನು.


ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದರು. ದಾವೀದನು ಅವುಗಳನ್ನೆಲ್ಲಾ ಒಟ್ಟುಸೇರಿಸಿ ಸುಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು