Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:2 - ಪರಿಶುದ್ದ ಬೈಬಲ್‌

2 ದೇವರು ತನ್ನನ್ನು ಇಸ್ರೇಲರ ಅರಸನನ್ನಾಗಿ ಆಗಲೇ ಮಾಡಿದ್ದಾನೆಂದು ದಾವೀದನಿಗೆ ತಿಳಿದುಬಂತು. ಆತನು ದಾವೀದನ ಸಾಮ್ರಾಜ್ಯವನ್ನು ವಿಸ್ತರಿಸಿ ಬಲಿಷ್ಠಗೊಳಿಸಿದನು. ಯೆಹೋವನು ದಾವೀದನನ್ನೂ ಇಸ್ರೇಲರನ್ನೂ ಪ್ರೀತಿಸಿದ್ದರಿಂದ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹೀಗೆ ದಾವೀದನು ದೇವಪ್ರಜೆಗಳಾದ ಇಸ್ರಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತ ಸ್ಥಾನಕ್ಕೇರಿಸಿ ತನ್ನನ್ನು ಇಸ್ರಯೇಲ್ ರಾಜನನ್ನಾಗಿ ಸ್ಥಿರಪಡಿಸುವರೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದರಿಂದ ದಾವೀದನು ದೇವಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ತನ್ನ ರಾಜ್ಯವು ಉನ್ನತಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ, ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:2
14 ತಿಳಿವುಗಳ ಹೋಲಿಕೆ  

ನಿಮಗೆ ಯಾವಾಗಲೂ ಬೇಕಾದಷ್ಟು ನೀರು ಇರುವುದು; ನೀವು ಬಿತ್ತಿದ ಬೀಜಗಳು ಬೆಳೆಯಲು ಸಾಕಷ್ಟು ನೀರು ಇರುವುದು. ನಿಮ್ಮ ಅರಸನು ಆಗಾಗ್ ಎಂಬವನಿಗಿಂತಲೂ ದೊಡ್ಡವನಾಗಿದ್ದಾನೆ. ನಿಮ್ಮ ರಾಜ್ಯವು ಬಹಳ ಬಲಿಷ್ಠವಾಗಿರುವುದು.


ದೇವರು ರಹಸ್ಯವನ್ನು ನನಗೂ ತಿಳಿಸಿದ್ದಾನೆ! ದೇವರು ನನಗೆ ತಿಳಿಸಿರುವುದು ನಾನು ಬೇರೆಯವರಿಗಿಂತ ಹೆಚ್ಚು ಬುದ್ಧಿವಂತನೆಂದಲ್ಲ. ಆದರೆ ಅರಸನಾದ ನಿನಗೆ ಇದರ ಅರ್ಥ ತಿಳಿಯಲಿ ಎಂಬ ಉದ್ದೇಶದಿಂದ ದೇವರು ನನಗೆ ತಿಳಿಸಿದ್ದಾನೆ. ಇದರಿಂದ ನಿನ್ನ ಮನಸ್ಸಿನ ಯೋಚನೆಗಳ ವಿಷಯ ನಿನಗೆ ತಿಳಿದುಬರುತ್ತದೆ.


ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?”


ಅದಕ್ಕೆ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ಹೀಗೆ ಉತ್ತರಿಸಿದನು: “ಸೊಲೊಮೋನನೇ, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಆದ್ದರಿಂದಲೇ ನಿನ್ನನ್ನು ಅವರ ಅರಸನನ್ನಾಗಿ ಆರಿಸಿಕೊಂಡಿರುತ್ತಾನೆ.


ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.


ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”


ನನ್ನ ವಂಶದವರ ವಿಷಯದಲ್ಲಿಯೂ ನೀನು ವಾಗ್ದಾನ ಮಾಡಿರುವೆ. ದೇವರೇ, ಯೆಹೋವನೇ, ನೀನು ನನ್ನನ್ನು ಒಬ್ಬ ಮಹಾವ್ಯಕ್ತಿಯೋ ಎಂಬಂತೆ ಪರಿಗಣಿಸಿರುವೆ.


“ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು.


“ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು.


ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.


ಜೆರುಸಲೇಮಿನಲ್ಲಿ ದಾವೀದನು ಇನ್ನೂ ಹಲವು ಸ್ತ್ರೀಯರನ್ನು ಮದುವೆಯಾದನು. ಅವನಿಗೆ ಅನೇಕ ಗಂಡುಹೆಣ್ಣು ಮಕ್ಕಳು ಹುಟ್ಟಿದರು.


ನಿನ್ನ ಜನರು ಮರಗಳನ್ನು ಕಡಿದು ಸಾಗಿಸುವ ಕಾರ್ಯಕ್ಕೆ ನಾನು ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಗೋಧಿಯನ್ನೂ ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಜವೆಗೋಧಿಯನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ದ್ರಾಕ್ಷಾರಸವನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು